ಎಣಿಕೆಗೂ ಮುನ್ನ ಮತ ದೃಢೀಕರಣ ಸಾಧ್ಯ ಇಲ್ಲ
Team Udayavani, May 23, 2019, 6:00 AM IST
ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶಕ್ಕೂ ಮೊದಲೇ ಪ್ರತಿಪಕ್ಷಗಳಿಗೆ ಬಹುದೊಡ್ಡ ಹಿನ್ನಡೆ ಆಗಿದೆ. ಮತ ಎಣಿಕೆ ಆರಂಭಿಸುವುದಕ್ಕೂ ಮುನ್ನವೇ 5 ಇವಿಎಂಗಳು ಮತ್ತು ವಿವಿಪ್ಯಾಟ್ಗಳ ಮತಗಳ ಹೋಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು 22 ಪ್ರತಿಪಕ್ಷಗಳು ಮಾಡಿದ್ದ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ಮಂಗಳವಾರವಷ್ಟೇ 22 ಪ್ರತಿಪಕ್ಷಗಳ ನಾಯಕರು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದರು. ಬುಧವಾರ ಬೆಳಗ್ಗೆ ಈ ಮನವಿಗೆ ಸಂಬಂಧಿಸಿ ಸಭೆ ನಡೆಸಿದ ಮೂವರು ಸದಸ್ಯರನ್ನು ಒಳಗೊಂಡ ಚುನಾವಣಾ ಆಯೋಗವು, ಮತ ಎಣಿಕೆಗೆ ಮೊದಲೇ ಮತಗಳ ಹೋಲಿಕೆ ಪ್ರಕ್ರಿಯೆ ನಡೆಸುವುದಕ್ಕೆ ನಿರಾಕರಿಸಿದೆ. ಮತ ಎಣಿಕೆ ವಿಚಾರದಲ್ಲಿ ಕೊನೇ ಕ್ಷಣದ ಬದಲಾವಣೆಗಳನ್ನು ತರಲು ಸಾಧ್ಯವಿಲ್ಲ. ಸದ್ಯ ಇರುವ ನಿಯಮದಂತೆಯೇ, ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಇವಿಎಂ ಮತ್ತು ವಿವಿಪ್ಯಾಟ್ ಮತಗಳ ಹೋಲಿಕೆಯ ಕೆಲಸ ಮುಗಿಸುತ್ತೇವೆ. ಪ್ರತಿಪಕ್ಷಗಳ ಮನವಿಯನ್ನು ಒಪ್ಪಲಾಗದು ಎಂದು ಚುನಾವಣಾ ಆಯುಕ್ತರಾದ ಸುನೀಲ್ ಅರೋರಾ, ಅಶೋಕ್ ಲಾವಾಸಾ ಮತ್ತು ಸುಶೀಲ್ ಚಂದ್ರ ಸ್ಪಷ್ಟಪಡಿಸಿದ್ದಾರೆ.
ಪ್ರತಿಪಕ್ಷಗಳ ಮನವಿ ಏನಾಗಿತ್ತು?: ಇವಿಎಂಗಳಲ್ಲಿನ ಮತಗಳನ್ನು ಎಣಿಕೆ ಮಾಡುವ ಮೊದಲೇ ಇವಿಎಂ ಮತ್ತು ವಿವಿಪ್ಯಾಟ್ಗಳ ಮತಗಳ ಹೋಲಿಕೆ ಪ್ರಕ್ರಿಯೆಯನ್ನು ನಡೆಸಬೇಕು. ಒಂದು ವೇಳೆ ಈ ಪ್ರಕ್ರಿಯೆ ವೇಳೆಯೇ ಲೋಪ ಕಂಡುಬಂದರೆ, ಆ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳಲ್ಲಿನ ವಿವಿಪ್ಯಾಟ್ಗಳ ಸ್ಲಿಪ್ಗ್ಳನ್ನು ಎಣಿಸಬೇಕು ಎಂದು ಪ್ರತಿಪಕ್ಷಗಳು ಮನವಿ ಮಾಡಿದ್ದವು. ಈ ಹಿಂದೆ ವಿವಿಪ್ಯಾಟ್ಗಳ ಶೇ.50ರಷ್ಟು ಮತಗಳನ್ನು ಎಣಿಕೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಈಗ ಚುನಾವಣಾ ಆಯೋಗ ಕೂಡ ಪ್ರತಿಪಕ್ಷಗಳ ಕೋರಿಕೆಯನ್ನು ಮಾನ್ಯ ಮಾಡದೇ ಇರುವುದು ವಿಪಕ್ಷಗಳಿಗೆ ತೀವ್ರ ಇರುಸುಮುರುಸು ಉಂಟಾಗಿದೆ.
ಇವಿಎಂಗಳ ಬಗ್ಗೆ ಅನುಮಾನ ಮತದಾರ ರಿಗೆ ಅವಮಾನ ಮಾಡಿದಂತೆ. ಇವೇ ಇವಿಎಂ ಬಳಕೆ ಮಾಡು ವಾಗ ಯುಪಿಎ ಕೂಡ 2 ಬಾರಿ ಗೆದ್ದಿತ್ತು. ಕಳೆದ ವರ್ಷ ಮೂರು ರಾಜ್ಯ ಗೆದ್ದಿಲ್ಲವೇ?
– ಡಾ.ಕೆ. ಸುಧಾಕರ್, ಕಾಂಗ್ರೆಸ್ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ