ಕಾಶ್ಮೀರದಲ್ಲಿ ಕರ್ಫ್ಯೂ ಇಲ್ಲ, ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ; ರಾಜ್ಯಸಭೆಗೆ ಶಾ ವರದಿ
Team Udayavani, Nov 20, 2019, 2:56 PM IST
ನವದೆಹಲಿ: ಕಾಶ್ಮೀರದಲ್ಲಿ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಕಾಶ್ಮೀರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ಕಾಶ್ಮೀರದ ಸ್ಥಿತಿಗತಿ ಕುರಿತ ವರದಿಯನ್ನು ಶಾ ಮೇಲ್ಮನೆಯಲ್ಲಿ ಪ್ರಸ್ತುತಪಡಿಸಿದ್ದರು. ಕಣಿವೆ ಪ್ರದೇಶದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿರುವುದನ್ನು ಶಾ ಈ ಸಂದರ್ಭದಲ್ಲಿ ಸಮರ್ಥಿಸಿಕೊಂಡರು. ಈ ನಿರ್ಧಾರದ ಬಗ್ಗೆ ಸ್ಥಳೀಯ ಆಡಳಿತ ಪುನರ್ ವಿಮರ್ಶಿಸಲಿದೆ ಎಂದರು.
ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆಯನ್ನು ಪುನರಾರಂಭಿಸುವ ಬಗ್ಗೆ ಆದಷ್ಟು ಶೀಘ್ರವಾಗಿ ಸ್ಥಳೀಯ ಆಡಳಿತಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಶಾ ತಿಳಿಸಿದರು. ಇಂಟರ್ನೆಟ್ ಸೇವೆ ಸ್ಥಗಿತಗೊಳಿಸುವ ಬಗ್ಗೆ ಜಮ್ಮು-ಕಾಶ್ಮೀರದ ಅಧಿಕಾರಿಗಳೇ ನಿರ್ಧಾರ ಕೈಗೊಂಡಿದ್ದರು.
ಕಾಶ್ಮೀರ ಪ್ರದೇಶದಲ್ಲಿ ಪಾಕಿಸ್ತಾನದ ಚಟುವಟಿಕೆ ಸಕ್ರಿಯವಾಗಿದೆ. ಭದ್ರತೆಯ ದೃಷ್ಟಿಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ. ಒಂದು ವೇಳೆ ಇಂಟರ್ನೆಟ್ ಸೇವೆ ಆರಂಭಿಸಬಹುದು ಎಂದು ಸ್ಥಳೀಯ ಆಡಳಿತಕ್ಕೆ ಮನವರಿಕೆಯಾದರೆ, ಆ ಬಗ್ಗೆ ಕೂಡಲೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಶಾ ವಿವರಣೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ