ಅಯೋಧ್ಯೆ:ರಾಮಮಂದಿರ ನಿರ್ಮಾಣಕ್ಕೆ ದೇಶಿಯ ಹಣ ಬಳಕೆ, ವಿದೇಶಿ ದೇಣಿಗೆ ಸ್ವೀಕರಿಸಲ್ಲ: ಟ್ರಸ್ಟ್
ಮಹಾ ಪೌರ್ಣಮಿ(ಫೆ.27)ವರೆಗೆ ಪ್ರಚಾರಾಂದೋಲನ ನಡೆಸಲಾಗುವುದು ಎಂದು ವರದಿ ತಿಳಿಸಿದೆ.
Team Udayavani, Dec 17, 2020, 3:30 PM IST
ನವದೆಹಲಿ: ವಿವಿಧ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಂದ ಸಂಗ್ರಹಿಸಿದ ದೇಶಿಯ ಹಣದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ್ ಟ್ರಸ್ಟ್ ಗುರುರುವಾರ(ಡಿಸೆಂಬರ್ 17, 2020) ಘೋಷಿಸಿದೆ.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ , ವಿದೇಶಗಳಲ್ಲಿ ದೇಣಿಗೆ ಪಡೆಯಲು ಟ್ರಸ್ಟ್ ಗೆ ಯಾವುದೇ ಪೂರ್ವಾನುಮತಿಯ ಅಗತ್ಯವಿಲ್ಲ. ಆದರೆ ವಿದೇಶದ ದೇಣಿಗೆ ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ದೇಣಿಗೆ ಸಂಗ್ರಹಿಸಲು ದೇಶಾದ್ಯಂತ ದೇಣಿಗೆ ಅಭಿಯಾನ ನಡೆಸುವುದಾಗಿ ವಿವರಿಸಿದೆ. 2021ರ ಜನವರು 15ರಿಂದ ಫೆಬ್ರುವರಿ 27ರವರೆಗೆ “ಶ್ರೀ ರಾಮ್ ಮಂದಿರ್ ನಿಧಿ ಸಮರ್ಪಣ್” ಆಂದೋಲನ ನಡೆಸಲಾಗುವುದು ಎಂದು ರಾಯ್ ಹೇಳಿದರು.
ಭಗವಾನ್ ಶ್ರೀರಾಮ ಜನಿಸಿದ ಕ್ಷೇತ್ರವಾದ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ದೇಶದ ಪ್ರತಿಯೊಬ್ಬ ರಾಮಭಕ್ತನೂ ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಮಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಯಿಂದ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ !
ದೇಶದ ಮನೆ, ಮನೆಗೂ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಹಿರಿಯ ಸಾಧು, ಸಂತರ ಜತೆಗೂಡಿ ಭೇಟಿ ನೀಡಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಮುಂಬರುವ ಮಕರ ಸಂಕ್ರಾಂತಿ (2021, ಜನವರಿ 15)ಯಿಂದ ಮಹಾ ಪೌರ್ಣಮಿ(ಫೆ.27)ವರೆಗೆ ಪ್ರಚಾರಾಂದೋಲನ ನಡೆಸಲಾಗುವುದು ಎಂದು ವರದಿ ತಿಳಿಸಿದೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಯ್, ಪ್ರಚಾರಾಂದೋಲನ ಸಮಯದಲ್ಲಿ ನೂತನ ರಾಮಮಂದಿರದ ಫೋಟೋಗಳು ಕೋಟ್ಯಂತರ ಮನೆಯನ್ನು ಅಲಂಕರಿಸಲಿದೆ ಎಂದು ಹೇಳಿದರು.
ದೇಣಿಗೆ ಸಂಗ್ರಹಿಸುವ ರಾಮಭಕ್ತರ ಬಳಿ 10, 100 ಹಾಗೂ ಒಂದು ಸಾವಿರ ರೂಪಾಯಿ ಕೂಪನ್ ಗಳು ಲಭ್ಯ. ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕೆಂದು ಆದೇಶ ನೀಡಲಾಗಿದೆ. ಟ್ರಸ್ಟ್ 10 ರೂ. ಮೌಲ್ಯದ 4 ಕೋಟಿ ಕೂಪನ್ಸ್, 100 ರೂ. ಮೌಲ್ಯದ 8 ಕೋಟಿ ಕೂಪನ್ಸ್ 1000 ಮೌಲ್ಯದ 12 ಲಕ್ಷ ಕೂಪನ್ಸ್ ಮುದ್ರಿಸಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!