ಲಕ್ಷ ಲಕ್ಷ ಕೊಟ್ಟರು ಮತ್ತಷ್ಟು ಬೇಡಿಕೆ.. ವರದಕ್ಷಿಣೆಗಾಗಿ ಪತ್ನಿ ಕೊಲೆಗೈದ ಪತಿ,ಕುಟುಂಬಸ್ಥರು


Team Udayavani, Apr 2, 2024, 10:30 AM IST

ಲಕ್ಷ ಲಕ್ಷ ಕೊಟ್ಟರು ಮತ್ತಷ್ಟು ಬೇಡಿಕೆ.. ವರದಕ್ಷಿಣೆಗಾಗಿ ಪತ್ನಿ ಕೊಲೆಗೈದ ಪತಿ,ಕುಟುಂಬಸ್ಥರು

ಲಕ್ನೋ: ವರದಕ್ಷಿಣೆ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ಮಹಿಳೆಯನ್ನು ಆಕೆಯ ಪತಿ ಮತ್ತು ಅವನ ಕುಟುಂಬವು ಹೊಡೆದು ಸಾಯಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

ಡಿಸೆಂಬರ್ 2022 ರಲ್ಲಿ ವಿಕಾಸ್‌ ಹಾಗೂ  ಕರಿಷ್ಮಾ ವಿವಾಹವಾಗಿತ್ತು. ದಂಪತಿಗಳು ವಿಕಾಸ್ ಅವರ ಕುಟುಂಬದೊಂದಿಗೆ ಗ್ರೇಟರ್ ನೋಯ್ಡಾದ ಇಕೋಟೆಕ್ -3 ನ ಖೇಡಾ ಚೌಗನ್‌ಪುರ ಗ್ರಾಮದಲ್ಲಿ ವಾಸಿಸುತ್ತಿದ್ದರು.

ಮದುವೆ ಸಮಯದಲ್ಲಿ ಕರಿಷ್ಮಾ ಅವರ ಕುಟುಂಬ ವರದಕ್ಷಿಣೆಯಾಗಿ ವರನ ಕುಟುಂಬಕ್ಕೆ 11 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಎಸ್‌ಯುವಿಯನ್ನು ನೀಡಿತ್ತು. ಆದರೆ ಇದಾದ ಬಳಿಕವೂ ವಿಕಾಸ್ ಅವರ ಕುಟುಂಬವು ವರ್ಷಗಳಿಂದ ಹೆಚ್ಚಿನ ವರದಕ್ಷಿಣೆಗೆ ಬೇಡಿಕೆಯನ್ನಿಟ್ಟು ಕರಿಷ್ಮಾಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಅವರ ಸಹೋದರ ದೀಪಕ್‌  ಆರೋಪಿಸಿದ್ದಾರೆ.

ಕರಿಷ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಆಕೆಗೆ ದಿನ ನಿತ್ಯದ ಕಿರುಕುಳ ಹೆಚ್ಚಾಗಿತ್ತು. ಈ ಕಾರಣಕ್ಕೆ ವಿಕಾಸ್ ಅವರ ಗ್ರಾಮದಲ್ಲಿ ಹಲವಾರು ಬಾರಿ ಎರಡು ಕುಟುಂಬ ಮಾತುಕತೆ ನಡೆಸಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಿಸಿದವು. ಇದಾದ ಬಳಿಕ ಕರಿಷ್ಮಾ ಅವರ ಕುಟುಂಬವು ವಿಕಾಸ್‌ ಕುಟುಂಬಕ್ಕೆ ಇನ್ನೂ 10 ಲಕ್ಷ ರೂ. ನೀಡಿದ್ದರೂ ದೌರ್ಜನ್ಯ ನಿಲ್ಲಲಿಲ್ಲ ಎಂದು ದೀಪಕ್ ಆರೋಪಿಸಿದ್ದಾರೆ.

ಇತ್ತೀಚೆಗೆ ದೀಪಕ್‌ ಅವರ ಕುಟುಂಬವು ಫಾರ್ಚುನರ್ ಕಾರು ಮತ್ತು  21 ಲಕ್ಷದ ಬೇಡಿಕೆಯನ್ನು ಇಟ್ಟಿತ್ತು. ಇದನ್ನು ಪೂರೈಸಲು ಸಾಧ್ಯವಿಲ್ಲ ಎಂದಿದ್ದಕ್ಕೆ ಕರಿಷ್ಮಾಳ ಮೇಲೆ ಪತಿ ಹಾಗೂ ಅವರ ಕುಟುಂಬಸ್ಥರು ಹಲ್ಲೆ ನಡೆಸಿದಿದ್ದಾರೆ.

ಹಲ್ಲೆ ಮಾಡಿದ್ದನ್ನು ಕರಿಷ್ಮಾ ತನ್ನ ಕುಟುಂಬಕ್ಕೆ ಫೋನ್‌ ಮಾಡಿ ತಿಳಿಸಿದ್ದಾರೆ. ಆಕೆಯ ಕುಟುಂಬ ಮನೆಗೆ ಬರುವಷ್ಟರಲ್ಲಿ ಕರಿಷ್ಮಾಳನ್ನು ಹಲ್ಲೆಗೈದು ಕೊಲೆ ಮಾಡಿದ್ದಾರೆ.

ಈ ಸಂಬಂಧ ಕರಿಷ್ಮಾ ಸಹೋದರ ದೀಪಕ್‌ ಅವರು ವಿಕಾಸ್‌ ಹಾಗೂ ಕುಟುಂಬದವರ ಮೇಲೆ ದೂರು ದಾಖಲಿಸಿದ್ದಾರೆ.

ವಿಕಾಸ್, ಆತನ ತಂದೆ ಸೋಂಪಾಲ್ ಭಾಟಿ, ತಾಯಿ ರಾಕೇಶ್, ಸಹೋದರಿ ರಿಂಕಿ ಮತ್ತು ಸಹೋದರರಾದ ಸುನೀಲ್ ಮತ್ತು ಅನಿಲ್ ವಿರುದ್ಧ ವರದಕ್ಷಿಣೆಗಾಗಿ ಕೊಲೆ ಪ್ರಕರಣ ದಾಖಲಾಗಿದೆ.

ವಿಕಾಸ್ ಮತ್ತು ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ಇತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.