ಕಮಲ್ ಹಾಸನ್ ನೂತನ ಆ್ಯಪ್ ಬಿಡುಗಡೆ, ತಮಿಳುನಾಡಿನಾದ್ಯಂತ ಪ್ರವಾಸ
Team Udayavani, Nov 7, 2017, 3:07 PM IST
ಚೆನ್ನೈ: ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಹುಭಾಷಾ ನಟ ಕಮಲ್ ಹಾಸನ್ ಮಂಗಳವಾರ ತಿಳಿಸಿದ್ದು, ಕೂಡಲೇ ತಾವು ರಾಜಕೀಯ ಜೀವನ ಪ್ರವೇಶಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ತಮ್ಮ ಹುಟ್ಟುಹಬ್ಬದ ದಿನದಂದೇ(ಇಂದು) ನೂತನ ಪಕ್ಷವನ್ನು ಘೋಷಿಸಲಿದ್ದಾರೆ ಎಂಬ ದಟ್ಟ ವದಂತಿ ಹಬ್ಬಿತ್ತು. ಆದರೆ ಯಾವುದೇ ಘೋಷಣೆ ಮಾಡುವ ಮುನ್ನ ಸಾಕಷ್ಟು ಶ್ರಮದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ತಮ್ಮ ರಾಜಕೀಯ ಪ್ರವೇಶ ಕಾಲ ಸನ್ನಿಹಿತವಾಗಿದ್ದು, ಇದರ ಪ್ರಥಮ ಹೆಜ್ಜೆಯಾಗಿ ಹುಟ್ಟುಹಬ್ಬದಂದು ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದಾರೆ.
ನಾನು ಇಂದು ಹೊಸ ರಾಜಕೀಯ ಪಕ್ಷವನ್ನು ಘೋಷಿಸುತ್ತೇನೆ ಎಂದು ಹಲವು ವದಂತಿ ಹರಡಿತ್ತು. ಆದರೆ ಅದಕ್ಕೂ ಮುನ್ನ ನಾನು ಕೂಡಾ ಸಾಕಷ್ಟು ಕೆಲಸ ಮಾಡಲಿಕ್ಕಿದೆ. ನಿಮ್ಮ ಜತೆ ಕುಳಿತುಕೊಂಡು ವಿಶ್ಲೇಷಣೆ ನಡೆಸಿದ ನಂತರವೇ ರಾಜಕೀಯ ಪಕ್ಷವನ್ನು ಘೋಷಿಸುವುದಾಗಿ ತಿಳಿಸಿದರು.
ಆ ನಿಟ್ಟಿನಲ್ಲಿ ತಮ್ಮ ಅಭಿಮಾನಿಗಳು, ಜನರ ಜತೆ ನೇರ ಸಂಪರ್ಕದಲ್ಲಿ ಇರಲು ಹೊಸ ಆಪ್ ಅನ್ನು ಬಿಡುಗಡೆ ಮಾಡಿರುವುದಾಗಿ ಹೇಳಿದರು. ಈ ಆಪ್ ಮಾಹಿತಿದಾರರಿಗೊಂದು ವೇದಿಕೆಯಾಗಿದೆ. ಎಲ್ಲಿ ಯಾವುದೇ ತಪ್ಪುಗಳು ನಡೆದರು ಕೂಡಾ ಈ ಆಪ್ ಅನ್ನು ಉಪಯೋಗಿಸಿಕೊಂಡು ಮಾಹಿತಿ ನೀಡಬಹುದಾಗಿದೆ. ಈ ಮೂಲಕ ನ್ಯಾಯ ಒದಗಿಸಲು ಪ್ರಯತ್ನಿಸುವುದಾಗಿ ಹೇಳಿದರು.
ಹಿಂದುಗಳ ಮನ ನೋಯಿಸುವುದು ನನ್ನ ಉದ್ದೇಶವಲ್ಲ:
ಇತ್ತೀಚೆಗಷ್ಟೇ ಬಲಪಂಥೀಯ ಉಗ್ರಗಾಮಿಗಳ ಬಗ್ಗೆಯೂ ಎಚ್ಚರದಿಂದ ಇರಬೇಕು ಎಂದು ಹೇಳಿಕೆ ನೀಡುವ ಮೂಲಕ ನಟ ಕಮಲ್ ಹಾಸನ್ ತೀವ್ರ ವಿವಾದಕ್ಕೊಳಗಾಗಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಉಪಯೋಗಿಸಿದ ಶಬ್ದ ತುಂಬಾ ಕಠಿಣವಾದದ್ದು. ನಾನು ನಿಜಕ್ಕೂ ಹಿಂದುಗಳ ಮನಸ್ಸನ್ನು ನೋಯಿಸಬೇಕೆಂದು ಈ ಹೇಳಿಕೆ ನೀಡಿಲ್ಲ. ನಾನು ಕೂಡಾ ಹಿಂದೂ ಕುಟುಂಬದಿಂದ ಬಂದವನು, ಆದರೆ ನಾವು ಅದನ್ನು(ಹಿಂದುತ್ವ) ಮತ್ತೊಂದು ದಿಕ್ಕಿನತ್ತ ಕೊಂಡೊಯ್ಯಬೇಕಾದ ಅಗತ್ಯತೆ ಇದೆ ಎಂದು ವಿಶ್ಲೇಷಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್