ಲಾಭದಲ್ಲಿರುವ ಸಹಕಾರಿ ಬ್ಯಾಂಕ್‌ಗಳಿಗೆ ಕೇಂದ್ರ ಗುದ್ದು


Team Udayavani, Dec 30, 2017, 6:00 AM IST

Arun-Jaitley-800-C.jpg

ನವದೆಹಲಿ: ಸಹಕಾರಿ ಬ್ಯಾಂಕ್‌ಗಳಿಗೆ ಆದಾಯ ತೆರಿಗೆ ವಿನಾಯ್ತಿ ನೀಡಲು ಸಾಧ್ಯವಾಗದು ಎಂದಿದೆ ಕೇಂದ್ರ ಸರ್ಕಾರ.
“”ಇತರ ವಾಣಿಜ್ಯ ಬ್ಯಾಂಕ್‌ಗಳಂತೆಯೇ ಅವುಗಳು ಹಣಕಾಸು ನಿರ್ವಹಣೆ ಮಾಡುವುದರಿಂದ ಲಾಭದಲ್ಲಿರುವ ಬ್ಯಾಂಕ್‌ಗಳಿಗೆ ತೆರಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಅವುಗಳನ್ನೂ ಇತರ ಬ್ಯಾಂಕ್‌ಗಳಂತೆಯೇ ಸಮಾನವಾಗಿ ಕಾಣಲಾಗುತ್ತದೆ” ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಶುಕ್ರವಾರ ಲೋಕಸಭೆಗೆ ತಿಳಿಸಿದರು. 

ಸಹಕಾರ ಕ್ಷೇತ್ರದಲ್ಲಿ ಇಲ್ಲದೇ ಇರುವವರಿಗೆ (ಸದಸ್ಯರಲ್ಲದವರಿಗೆ) ಕೂಡ ಕೆಲವೊಂದು ಸಂದರ್ಭದಲ್ಲಿ ಬ್ಯಾಂಕ್‌ಗಳ ಸೇವೆ ಲಭ್ಯವಾಗುತ್ತದೆ ಎಂದೂ ಹೇಳಿದ್ದಾರೆ.

ಹೆಚ್ಚಿನ ಎಲ್ಲಾ ಬ್ಯಾಂಕ್‌ಗಳು ಕೂಡ ಬಿಲ್‌ ಡಿಸ್ಕೌಂಟ್‌ ಮತ್ತು ಕಲೆಕ್ಷನ್‌, ನಿಗದಿತ ಠೇವಣಿ, ಲಾಕರ್‌ಗಳನ್ನು ಒದಗಿಸುತ್ತಿವೆ ಎಂದು ಹೇಳಿರುವ ಅವರು,  “”ಆದಾಯ ತೆರಿಗೆ ಎನ್ನುವುದು ಲಾಭದ ಮೇಲೆ ತೆರಿಗೆ ವಿಧಿಸುವಂಥ ಪ್ರಕ್ರಿಯೆ. ಹೀಗಾಗಿ ಲಾಭದಲ್ಲಿರುವ ಸಹಕಾರ ಬ್ಯಾಂಕ್‌ಗಳಿಗೆ ಅದರಿಂದ ವಿನಾಯಿತಿ ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದಿದ್ದಾರೆ.

ಸಹಕಾರ ತೆರಿಗೆ ವಿನಾಯಿತಿ ಕಾನೂನು ಜಿಜ್ಞಾಸೆ!
ಲಾಭದಲ್ಲಿರುವ ಸಹಕಾರ ಸಂಘಗಳಿಗೆ ಆದಾಯ ತೆರಿಗೆ ವಿನಾಯಿತಿ ಸಿಗುವುದಿಲ್ಲವೆನ್ನುವ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿಕೆ ಬೆನ್ನಲ್ಲೇ, ಸಹಕಾರ ಬ್ಯಾಂಕ್‌ಗಳಿಗೆ ಆದಾಯ ತೆರಿಗೆ ವಿನಾಯಿತಿ ಸಂಬಂಧದ ತೆರಿಗೆ ಇಲಾಖೆ ಸೆಕ್ಷನ್‌ ಹಾಗೂ ಆಯಾರಾಜ್ಯಗಳ ಸಹಕಾರಿ ಸಂಸ್ಥೆಗಳ ಕಾಯಿದೆಗಳ ನಿಯಮಗಳೇ ಕಾನೂನು ಜಿಜ್ಞಾಸೆಗೆ ಒಳಪಡುವ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಹಕಾರ ಸಂಸ್ಥೆಗಳು ಷೇರುದಾರರಲ್ಲದವರ ಜೊತೆಯೂ ಹಣಕಾಸು ವಹಿವಾಟು ನಡೆಸಿ ಲಾಭಗಳಿಸಿರುವುದರಿಂದ  ಕೇಂದ್ರಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಆದರೆ,  ರಾಜ್ಯಸಹಕಾರಿ ಕಾಯಿದೆಯೂ ಸೇರಿದಂತೆ ಬಹುತೇಕ ರಾಜ್ಯಗಳ ಸಹಕಾರ ಸಂಸ್ಥೆಗಳ ಕಾಯಿದೆಗಳಲ್ಲಿ, ಷೇರುದಾರರಲ್ಲದೆ ಇತರರ ಜೊತೆ ವಹಿವಾಟು ನಡೆಸಲು ಯಾವುದೇ ನಿರ್ಬಂಧವಿಲ್ಲ. ಹೀಗಾಗಿ ಸಹಕಾರ ಸಂಸ್ಥೆಗಳು ನಾಮಕೇವಾಸ್ತೆ  ಸದಸ್ಯರನ್ನಾಗಿ ಸದಸ್ಯತ್ವ ನೀಡಿ ಅವರಿಂದ ಹಣ ಠೇವಣಿ ಇಟ್ಟುಕೊಂಡು ವ್ಯವಹಾರ ನಡೆಸಿವೆ. ಇದೀಗ ಕೇಂದ್ರ ಸರ್ಕಾರದ ನಿರ್ಧಾರದಿಂದ ಸಹಕಾರ ಕ್ಷೇತ್ರಕ್ಕೆ  ಹೆಚ್ಚು ಪೆಟ್ಟು ಬೀಳುವ  ಸಾಧ್ಯತೆಯಿದೆ  ಎಂದು ಹೈಕೋರ್ಟ್‌ ವಕೀಲ ಪಿ.ಪಿ ಹೆಗಡೆ ತಿಳಿಸಿದರು.

ಇನ್ನು ಆದಾಯ ತೆರಿಗೆ ಇಲಾಖೆ ಕಾಯಿದೆ ಸೆಕ್ಷನ್‌ 80 (ಪಿ) ಪ್ರಕಾರ ಸಹಕಾರ ಸಂಸ್ಥೆಗಳಿಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಸಹಕಾರ ಸಂಸ್ಥೆಗಳ ಕಾಯಿದೆಯಲ್ಲೂ ಷೇರುದಾರರಲ್ಲದವರ ಜೊತೆ ವಹಿವಾಟು ನಡೆಸಲು ನಿರ್ಬಂಧವಿಲ್ಲ. ಇದೀಗ ತೆರಿಗೆ ವಿನಾಯಿತಿ ಸಾಧ್ಯವಿಲ್ಲ ಎಂಬುದರ ಬಗ್ಗೆ ಕೇಂದ್ರಸರ್ಕಾರ ಆದಾಯ ತೆರಿಗೆ ಇಲಾಖೆ ಕಾಯಿದೆ ತಿದ್ದುಪಡಿ ಮಾಡಬೇಕು, ಇಲ್ಲವೇ ರಾಜ್ಯಗಳು ಕಾಯಿದೆಗಳನ್ನು ತಿದ್ದುಪಡಿಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಸುಪ್ರೀಂಕೋರ್ಟ್‌ ಏನು ಹೇಳಿದೆ?
ಆದಾಯ ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ಕೇರಳದ ಸಿಟಿಜನ್ಸ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಅರ್ಜಿದಾರ ಸಂಸ್ಥೆಯ ಷೇರುದಾರರಲ್ಲದೆ , ಇತರರೊಂದಿಗೆ ಹಣಕಾಸು ವಹಿವಾಟು ನಡೆಸಿದೆ. ಹೆಚ್ಚು ಲಾಭವೂ ಗಳಿಸಿದೆ. ಆದಾಯ ತೆರಿಗೆ ವಿನಾಯಿತಿ ಸಿಗುವುದಿಲ್ಲ ಎಂದು ತೀರ್ಪು ಆಗಸ್ಟ್‌ 16ರಂದು ನೀಡಿತ್ತು. ಸುಪ್ರೀಂಕೋರ್ಟ್‌  ತೀರ್ಪಿನ ಬೆನ್ನಲ್ಲೇ ಹೆಚ್ಚು ಲಾಭ ಗಳಿಸಿದ ಸಹಕಾರ ಸಂಸ್ಥೆಗಳಿಗೆ ತೆರಿಗೆ  ವಿನಾಯಿತಿ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.