ಕೃಷಿ ಆದಾಯಕ್ಕೆ ತೆರಿಗೆ ಇಲ್ಲ: ಜೇಟ್ಲಿ


Team Udayavani, Mar 23, 2017, 3:45 AM IST

Arun-Jaitley-800-B.jpg

ನವದೆಹಲಿ: ಕೃಷಿ ಆದಾಯದ ಮೇಲೆ ಯಾವುದೇ ತೆರಿಗೆ ಹೇರುವ ಪ್ರಸ್ತಾವನೆ ಇಲ್ಲ. ಇದು ಸಂಸತ್ತಿನ ಶಾಸನ ಸಭೆಗೆ ಹೊರತಾದ್ದು. ಅದೇನಿದ್ದರೂ, ರಾಜ್ಯದ ತೀರ್ಮಾನಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.  

2017ರ ಹಣಕಾಸು ಮಸೂದೆ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆಗೆ ಜೇಟ್ಲಿ ಈ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸರ್ಕಾರ ಆಧಾರ್‌ ಅನ್ನು ತೆರಿಗೆ ರಿಟನ್ಸ್‌ ಅನ್ನು ಸಲ್ಲಿಸುವಲ್ಲಿ ಕಡ್ಡಾಯ ಮಾಡುತ್ತಿರುವುದಕ್ಕೆ ಜೇಟ್ಲಿ ಸ್ಪಷ್ಟನೆ ನೀಡಿದ್ದಾರೆ. ಆದಾಯ ತೆರಿಗೆ ರಿಟರ್ನ್ಸ್  ಸಲ್ಲಿಸುವ ವೇಳೆ ಆಧಾರ್‌ ಕಡ್ಡಾಯ ಮಾಡುವುದರಿಂದ ತೆರಿಗೆ ವಂಚನೆಯನ್ನು ತಡೆಯಲು ಸಾಧ್ಯವಾಗುತ್ತದೆ. ಅದನ್ನು ಪುನರ್‌ ಪರಿಶೀಲನೆ ಮಾಡುವುದಿಲ್ಲವೆಂದರು.

ಸರ್ಕಾರ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಆಧಾರ್‌ ಕಡ್ಡಾಯ ಮಾಡುವುದರ ಮೂಲಕ ಆಧಾರ್‌ ಅನ್ನು ಜನರ ಮೇಲೆ ಹೇರುತ್ತದೆ ಪ್ರತಿಪಕ್ಷಗಳ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಅದಕ್ಕೆ ಉತ್ತರಿಸಿದ ಬಿಜೆಡಿ ಆಕ್ಷೇಪಕ್ಕೆ ಉತ್ತರಿಸಿದ ಜೇಟ್ಲಿ, ತೆರಿಗೆ ರಿಟನ್ಸ್‌ ಮತ್ತು ಪಾನ್‌ಗೆ ಅರ್ಜಿ ಸಲ್ಲಿಸುವ ವೇಳೆಗೆ ಆಧಾರ್‌ ಅನ್ನು ಕಡ್ಡಾಯ ಮಾಡಲಾಗಿದೆ. ಇದರಿಂದ ಜನರು ಒಂದಕ್ಕಿಂತ ಹೆಚ್ಚು ಪಾನ್‌ ಸಂಖ್ಯೆ ಪಡೆದು ತೆರಿಗೆ ವಂಚನೆ ಮಾಡುವುದನ್ನು  ತಪ್ಪಿಸಿದಂತಾಗುತ್ತದೆ. 108 ಕೋಟಿ ಮಂದಿ ಆಧಾರ್‌ ಅನ್ನು ಹೊಂದಿರುವಾಗ, ಅಕ್ರಮವನ್ನು ತಡೆಯುವ ಆ ತಾಂತ್ರಿಕತೆ ಬಳಸುವುದಕ್ಕೇನು ಸಮಸ್ಯೆ  ಎಂದು ಪ್ರತಿ ಪ್ರಶ್ನೆ ಎಸೆದರು. 

ಐದು ಮಸೂದೆ ಮಂಡನೆ: ಜುಲೈ 1ರಿಂದ ಜಿಎಸ್‌ಟಿಗೆ ಜಾರಿಗೆ ಅನುಕೂಲವಾಗುವಂತೆ ಸಂಸತ್‌ನಲ್ಲಿ ಐದು ವಿಧೇಯಕಗಳನ್ನು ಮಂಡಿಸಲಾಗುತ್ತದೆ ಎಂದರು. ಈ ಬಗ್ಗೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಜಿಎಸ್‌ಟಿ ಸಭೆಯಲ್ಲಿ ಒಮ್ಮತಕ್ಕೆ ಬರಲಾಗಿದೆ ಎಂದರು.

ಜೇಟ್ಲಿ ಅವರ ಭಾಷಣ ಬಳಿಕ 2017ರ ಹಣಕಾಸು ಮಸೂದೆಯನ್ನು ಲೋಕಸಭೆ ಅಂಗೀಕರಿಸಿತು. ಇದರಲ್ಲಿ 40 ತಿದ್ದುಪಡಿ  ಮಾಡಲಾಗಿದ್ದು, ಅದರಲ್ಲಿ ನಗದು ವ್ಯವಹಾರ ಮಿತಿಯನ್ನು 3 ಲಕ್ಷದಿಂದ 2 ಲಕ್ಷ ರೂಪಾಯಿಗೆ ಇಳಿಸುವ ವಿಚಾರವೂ ಸೇರಿದೆ. 

ಐಟಿ ನೋಟಿಸ್‌ಗೆ 9.29 ಲಕ್ಷ ಮಂದಿ ಉತ್ತರಿಸಿಲ್ಲ!
ಅಪನಗದೀಕರಣ ಬಳಿಕ ಮಿತಿಗಿಂತ ಹೆಚ್ಚು ನಗದು ಠೇವಣಿ ಇರಿಸಿದ ಬಗ್ಗೆ ತೆರಿಗೆ ಇಲಾಖೆ ಕಳಿಸಿದ ನೋಟಿಸ್‌ಗೆ 9.29 ಲಕ್ಷ ಮಂದಿ ಉತ್ತರಿಸಿಲ್ಲ ಎಂದು ಜೇಟ್ಲಿ ಹೇಳಿದ್ದಾರೆ. ಈ ಕುರಿತಂತೆ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. 

ಅಪನಗದೀಕರಣ ಬಳಿಕ 50 ದಿನಗಳಲ್ಲಿ 18 ಲಕ್ಷ ಮಂದಿ ಮಿತಿಗಿಂತ ಹೆಚ್ಚು 500 ಮತ್ತು 1000 ರೂ. ನೋಟುಗಳನ್ನು ಠೇವಣಿ ಇಟ್ಟಿದ್ದಾರೆ. ಇವರಿಗೆ ಎಸ್‌ಎಂಎಸ್‌ ಮತ್ತು ಇಮೇಲ್‌ ಮೂಲಕ ನೋಟಿಸ್‌ಗಳನ್ನು ಕಳಿಸಲಾಗಿದ್ದು, 8.71 ಲಕ್ಷ ಮಂದಿ ಅವುಗಳಿಗೆ ಉತ್ತರ ನೀಡಿದ್ದಾರೆ. ಉತ್ತರ ನೀಡದವರ ವಿರುದ್ಧ ಆದಾಯ ತೆರಿಗೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಅಪನಗದೀಕರಣಕ್ಕೆ ಜನ ಮೆಚ್ಚುಗೆ
ನೋಟುಗಳ ಅಪದೀಕರಣ ಮುಂದಿಟ್ಟುಕೊಂಡು ಕೇಂದ್ರದ ವಿರುದ್ಧ ಪ್ರತಿಬಾರಿಯೂ ಟೀಕೆ ನಡೆಸುವ ಕಾಂಗ್ರೆಸ್‌ ಕಾಲೆಳೆದ ಜೇಟ್ಲಿ, ಜನರು ನೀಡಿದ ಅಭಿಪ್ರಾಯ ನೋಡಿ ಎಂದು ಐದು ರಾಜ್ಯಗಳ ಚುನಾವಣಾ ಫ‌ಲಿತಾಂಶ ವಿಚಾರ ಲೋಕಸಭೆಯಲ್ಲಿ ಪ್ರಸ್ತಾಪಿಸಿದರು. ಈ  ಮೂಲಕ ಪ್ರಧಾನಿ ಮೋದಿ ಪ್ರಭಾವಿ ನಾಯಕ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದರು. 

ಪರೋಕ್ಷವಾಗಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿರುದ್ಧ ಟೀಕಿಸಿದ ಜೇಟ್ಲಿ ಅಪನಗದೀಕರಣದ ಬಳಿಕ ಜಿಡಿಪಿ ಪ್ರಮಾಣ ಶೇ.2ಕ್ಕೆ ಇಳಿಯುತ್ತದೆ ಎಂದ ಕಾಂಗ್ರೆಸ್‌ ತನ್ನ ಸಲಹೆ ನೀಡುವವರನ್ನು ಬದಲಿಸಲಿ ಎಂದರು.
 

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.