ಬಜೆಟ್; ರಾಜಕೀಯ ಪಕ್ಷಗಳಿಗೆ ಶಾಕ್, ನಗದು ವ್ಯವಹಾರ ಮಿತಿ 3 ಲಕ್ಷ ರೂ.
Team Udayavani, Feb 1, 2017, 1:05 PM IST
ನವದೆಹಲಿ: 2017-18ನೇ ಸಾಲಿನ ಬಜೆಟ್ ಅನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಬುಧವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಡಿಜಿಟಲ್ ಇಂಡಿಯಾಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅಲ್ಲದೇ ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ರೈಲ್ವೆ ಬಜೆಟ್ ಅನ್ನು ಸಾಮಾನ್ಯ ಬಜೆಟ್ ಜೊತೆ ವಿಲೀನಗೊಳಿಸಿ ಮಂಡಿಸಲಾಗಿದೆ.
ಈ ಬಾರಿಯ ಬಜೆಟ್ ನಲ್ಲಿ ರಾಜಕೀಯ ಪಕ್ಷಗಳಿಗೆ ಬಿಗ್ ಶಾಕ್ ಕೊಡಲಾಗಿದೆ. ಯಾವುದೇ ರಾಜಕೀಯ ಪಕ್ಷಗಳಿಗೆ ಒಬ್ಬ ವ್ಯಕ್ತಿ 2 ಸಾವಿರ ರೂಪಾಯಿಗಿಂತ ಹೆಚ್ಚು ದೇಣಿಗೆ ನೀಡಿದರೆ ಆತನ ವಿವರ ಕೊಡುವುದು ಕಡ್ಡಾಯ ಎಂದು ಹೇಳಿದೆ.
ಅಲ್ಲದೇ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಸಂಬಂಧ ಕೇಂದ್ರ ನಿಯಮ ರೂಪಿಸಿದ್ದು, 2 ಸಾವಿರ ರೂಪಾಯಿ ಮಾತ್ರ ನಗದಿನಲ್ಲಿ ಪಾವತಿಸಬಹುದಾಗಿದೆ. 2 ಸಾವಿರಕ್ಕಿಂತ ಹೆಚ್ಚು ದೇಣಿಗೆಯನ್ನು ಚೆಕ್ ಅಥವಾ ಡಿಜಿಟಲ್ ಮಾದರಿಯಲ್ಲಿಯೇ ಪಾವತಿ ಮಾಡಬೇಕು.
ಜನಸಾಮಾನ್ಯರಿಗೆ ಆದಾಯ ತೆರಿಗೆ ಹೊರೆ ಅರ್ಧ ಇಳಿಕೆ!
2017ರ ಸಾಲಿನ ಬಜೆಟ್ ನಲ್ಲಿಯೂ ಕೇಂದ್ರ ಸರ್ಕಾರ ಆದಾಯ ತೆರಿಗೆ ಮಿತಿ ಏರಿಕೆ ಮಾಡಿಲ್ಲ. 2.5 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. .ಆದರೆ ಆದಾಯ ತೆರಿಗೆ ದರ ಶೇ.10ರಿಂದ ಶೇ.5ಕ್ಕೆ ಇಳಿಸಿದೆ. 2.5ಲಕ್ಷದಿಂದ 5 ಲಕ್ಷದವರೆಗೆ ಶೇ.5ರಷ್ಟು ತೆರಿಗೆ, 5 ಲಕ್ಷದಿಂದ ಶೇ.10ಲಕ್ಷದವರೆಗೆ ಶೇ.20ರಷ್ಟು ತೆರಿಗೆ. ಹಿರಿಯ ನಾಗರಿಕರಿಗೆ 3ಲಕ್ಷದಿಂದ 3.5ಲಕ್ಷದವರೆಗೆ ಆದಾಯ ತೆರಿಗೆ ಮಿತಿ ಏರಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
TRAI ವ್ಯಾಪ್ತಿಗೆ ಫೇಸ್ಬುಕ್, ವಾಟ್ಸ್ಆ್ಯಪ್, ಎಕ್ಸ್?
Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!
MUST WATCH
ಹೊಸ ಸೇರ್ಪಡೆ
Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ