ಸುಲ್ತಾನ್‌ಪುರಿ ಅಂಜಲಿ ಪ್ರಕರಣ: ಅತ್ಯಾಚಾರ ನಡೆದಿಲ್ಲ, ಅಪಘಾತ ಮಾತ್ರ

ಶವ ಪರೀಕ್ಷೆಯ ಪ್ರಾಥಮಿಕ ವರದಿ ಉಲ್ಲೇಖ

Team Udayavani, Jan 4, 2023, 7:10 AM IST

ಸುಲ್ತಾನ್‌ಪುರಿ ಅಂಜಲಿ ಪ್ರಕರಣ: ಅತ್ಯಾಚಾರ ನಡೆದಿಲ್ಲ, ಅಪಘಾತ ಮಾತ್ರ

ಹೊಸದಿಲ್ಲಿ: ದಿಲ್ಲಿಯ ಸುಲ್ತಾನ್‌ಪುರಿ ಪ್ರಕರಣದಲ್ಲಿ ಮೃತ ಯುವತಿಯ ಶವ ಪರೀಕ್ಷೆಯ ಪ್ರಾಥಮಿಕ ವರದಿ ಪ್ರಕಾರ, ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ. ಆಕೆಯ ಖಾಸಗಿ ಅಂಗ ಗಳಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಉಲ್ಲೇಖಿಸಲಾಗಿದೆ.

ಮೌಲಾನಾ ಅಜಾದ್‌ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಮಂಡಳಿಯ ತಂಡ ಸೋಮವಾರ ಮೃತ ಅಂಜಲಿ ಸಿಂಗ್‌(20) ಅವರ ಶವ ಪರೀಕ್ಷೆ ನಡೆಸಿತು.

ಸ್ನೇಹಿತೆ ಜತೆಗಿದ್ದಳು: ಸ್ಕೂಟಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸ್ನೇಹಿತೆ ನಿಧಿ ಕೂಡ ಅಂಜಲಿ ಜತೆಗಿದ್ದರು ಎಂಬ ಮಾಹಿತಿ ಪೊಲೀಸರ ವಿಚಾರಣೆಯಿಂದ ಬಹಿರಂಗವಾಗಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಅಂಜಲಿ ಮತ್ತು ನಿಧಿ ಹೊಟೇಲ್‌ನಲ್ಲಿ ಪಾರ್ಟಿ ಮಾಡಿದ್ದರು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಹೊಟೇಲ್‌ನಿಂದ ಆಚೆ ಬಂದ ಇಬ್ಬರ ನಡುವೆ ಜಗಳವಾಗಿದೆ. ಈ ದೃಶ್ಯಗಳು ಹೊಟೇಲ್‌ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರಿನಡಿ ಸಿಲುಕಿದಳು: “ಸ್ಕೂಟಿ ಯಾರು ಓಡಿಸಬೇಕು ಎಂಬ ವಿಷಯದಲ್ಲಿ ನನಗೂ ಹಾಗೂ ಅಂಜಲಿ ನಡುವೆ ವಾದವಾ ಯಿತು. ಆಗ ಸ್ಕೂಟಿ ಕೀ ಕಸಿಯಲು ಸಣ್ಣ ಜಗಳವಾಯಿತು. ಅನಂತರ ಅಂಜಲಿಯೇ ಸ್ಕೂಟಿ ಓಡಿಸಿದಳು. ನಾನು ಹಿಂಬದಿ ಕುಳಿತಿದ್ದೆ. ಸುಲ್ತಾನ್‌ಪುರಿ ಹೊರವಲಯದಲ್ಲಿ ಹೋಗುತ್ತಿರು ವಾಗ ಕಾರು ಬಂದು ಢಿಕ್ಕಿ ಹೊಡೆಯಿತು. ಇದರಿಂದ ನಾನು ಹಾರಿ ಕೆಳಕ್ಕೆ ಬಿದ್ದೆ. ಅಂಜಲಿ ಕಾರಿನ ಅಡಿಯಲ್ಲಿ ಸಿಲುಕಿದಳು. ನಾನು ಕಾರು ನಿಲ್ಲಿಸುವಂತೆ ಚಾಲಕನಿಗೆ ಹೇಳಿದೆ. ಕಾರಿನಡಿ ಅಂಜಲಿ ಸಿಲುಕಿದ್ದು ಅವರಿಗೆ ಗೊತ್ತಿತ್ತು. ಆದರೂ ಕಾರು ನಿಲ್ಲಿಸದೇ ಮುಂದಕ್ಕೆ ಹೋದರು. ಘಟನೆಯಿಂದ ಗಾಬರಿಗೊಂಡು ಸ್ಥಳದಿಂದ ಹೊರಟುಬಿಟ್ಟೆ. ಆ ಕ್ಷಣದಲ್ಲಿ ಯಾರಿಗೆ ವಿಷಯ ಹೇಳಬೇಕೆಂದು ತಿಳಿಯಲಿಲ್ಲ,’ ಎಂದು ಮೃತ ಅಂಜಲಿ ಸ್ನೇಹಿತೆ ನಿಧಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ.

ಕಾರಿನ ಕೆಳಗೆ ಕೈ ಕಾಣಿಸಿತು: “ಹೊಸ ವರ್ಷದ ಹಿನ್ನೆಲೆ ನಾವು ಐವರು ಮದ್ಯ ಸೇವಿಸಿದ್ದೆವು. ದೊಡ್ಡ ಧ್ವನಿಯಲ್ಲಿ ಸಂಗೀತ ಹಾಕಿಕೊಂಡು ಕಾರಿನಲ್ಲಿ ಹೋಗುತ್ತಿದ್ದೆವು. ಸ್ಕೂಟಿ ರಸ್ತೆಯ ಆಚೆ-ಈಚೆ ಚಲಿಸುತ್ತಿದ್ದ ಕಾರಣ ಸ್ಕೂಟಿಗೆ ನಮ್ಮ ಕಾರು ಢಿಕ್ಕಿ ಹೊಡೆಯಿತು. ನಾವು ಕಾರು ಸಮೇತ ಪರಾರಿಯಾಗಲು ಮುಂದಾದೆವು. ಕಾರಿನ ಅಡಿ ಯುವತಿಯ ದೇಹ ಸಿಲುಕಿರುವುದು ತಿಳಿಯಲಿಲ್ಲ. ಆದರೆ ಕೆಳಗೇನೋ ಸಿಕ್ಕಿಹಾಕಿಕೊಂಡಿದೆ ಎಂದು ಒಬ್ಬ ಗೆಳೆಯ ಹೇಳಿದ. ಅದಕ್ಕೆ ನಾವೆಲ್ಲ ಅಂಥದ್ದೇನೂ ಇಲ್ಲ ಎಂದೆವು.

ಕಂಜಾವಾಲಾದಲ್ಲಿ ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಕಾರಿನಲ್ಲಿದ್ದ ಒಬ್ಬನಿಗೆ ಕಾರಿನಡಿಯಲ್ಲಿ ಯುವತಿಯ ಕೈ ಕಾಣಿಸಿತು. ಈ ವೇಳೆ ತತ್‌ಕ್ಷಣ ಕಾರು ನಿಲ್ಲಿಸಿದರಿಂದ ಮೃತದೇಹ ಕಾರಿನಡಿಯಿಂದ ಹೊರಬಂತು. ಅನಂತರ ನಾವು ಅಲ್ಲಿಂದ ಕಾಲ್ಕಿತ್ತೆವು,’ ಎಂದು ಬಂಧಿತ ಆರೋಪಿಗಳು ಹೇಳಿದ್ದಾರೆ.

 

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.