ದೇವೇಗೌಡರ ಕುಟುಂಬ ದೇವಳ, ಅರ್ಚಕರ ಮನೆ ಮೇಲೆ ದಾಳಿ ನಡೆಸಿಲ್ಲ: ಐಟಿ ಇಲಾಖೆ
Team Udayavani, Apr 13, 2019, 3:36 PM IST
ಹೊಸದಿಲ್ಲಿ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುಟುಂಬ ಅರ್ಚಕರ ದೇವಸ್ಥಾನ ಮತ್ತು ನಿವಾಸದ ಮೇಲೆ ದಾಳಿ ನಡೆಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಆ ರೀತಿಯ ಯಾವುದೇ ಐಟಿ ದಾಳಿಯನ್ನು ಕರ್ನಾಟಕ ಆದಾಯ ತೆರಿಗೆ ಇಲಾಖೆ ನಡೆಸಿಲ್ಲ ಎಂದು ಐಟಿ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದ್ದಾರೆ.
ದೇವೇಗೌಡರ ಹುಟ್ಟೂರಾದ ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿನ ಶಿವ ದೇವಸ್ಥಾನ ಮತ್ತು ಅದರ ಅರ್ಚಕರ ಮನೆಯ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂಬ ವರದಿಯನ್ನು ಅನುಸರಿಸಿ ಐಟಿ ಇಲಾಖೆ ಈ ಸ್ಪಷ್ಟನೆಯನ್ನು ನೀಡಿದೆ.
ಐಟಿ ಇಲಾಖಾಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ಅಪರಿಚಿತ ವ್ಯಕ್ತಿಗಳು ನನ್ನ ಮನೆಗೆ ಬಂದು ನನ್ನನ್ನು ಪ್ರಶ್ನಿಸಿದರು ಮತ್ತು ಹರದನಹಳ್ಳಿ ಶಿವ ದೇವಾಲಯದಲ್ಲಿ ಶೋಧ ಕಾರ್ಯ ನಡೆಸಿದರು ಎಂದು ಅರ್ಚಕರು ನಿನ್ನೆ ಶುಕ್ರವಾರ ದೂರು ನೀಡಿದ್ದರು.
ಇದಕ್ಕೆ ಉತ್ತರವಾಗಿ ಐಟಿ ಇಲಾಖೆ, “ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಸುದ್ದಿಗಾರರು ಈ ರೀತಿ ಸುಳ್ಳುಗಳನ್ನು ವರದಿ ಮಾಡುತ್ತಿರುವುದು ದುರದೃಷ್ಟಕರ ಎಂದು ಐಟಿ ಇಲಾಖೆ ಹೇಳಿದೆ.
ಈ ನಡುವೆ ಕರ್ನಾಟಕ ಕಾಂಗ್ರೆಸ್ ಸಮಿತಿ ಈ ತಥಾಕಥಿತ ಐಟಿ ದಾಳಿಯನ್ನು ಬಲವಾಗಿ ಖಂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!