ಕೋವಿಡ್ ಭೀತಿ : ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿದ ಉತ್ತರ ಪ್ರದೇಶ ಸರ್ಕಾರ
Team Udayavani, Jul 18, 2021, 2:44 PM IST
ಪ್ರಾತಿನಿಧಿಕ ಚಿತ್ರ
ಲಕ್ನೋ : ಕೋವಿಡ್ ಹಿನ್ನೆಲೆಯಲ್ಲಿ ಪ್ರತಿ ವರ್ಷ ನಡೆಯುವ ಕನ್ವರ್ ಯಾತ್ರೆಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕೊವಿಡ್ ಸೋಂಕಿನ ಎರಡನೇ ಅಲೆ ಸುಧಾರಿಸುತ್ತಿದ್ದರೂ ಕೂಡ ಸಂಭಾವ್ಯ ಮೂರನೇ ಅಲೆಯ ಭೀತಿಯಿಂದ ಅಲ್ಲಿನ ಸರ್ಕಾರ ಕಜನ್ವರ್ ಯಾತ್ರೆಯನ್ನು ಈ ವರ್ಷ ರದ್ದು ಮಾಡುವಂತೆ ಮನವಿ ಮಾಡಿಕೊಂಡಿತ್ತು, ಸರ್ಕಾರದ ಮನವಿಗೆ ಕನ್ವರ್ ಸಂಘಗಳು ಕನ್ವರ್ ಯಾತ್ರೆಯನ್ನು ರದ್ದುಗೊಳಿಸುವುದಕ್ಕೆ ಒಪ್ಪಿಗೆ ನೀಡಿವೆ.
ಇದನ್ನೂ ಓದಿ : ಭಾರತ-ಲಂಕಾ ಮೊದಲ ಏಕದಿನ: ಟಾಸ್ ಗೆದ್ದ ಲಂಕಾ, ಭಾರತ ತಂಡದಲ್ಲಿ ಇಬ್ಬರು ಪದಾರ್ಪಣೆ
ಈ ಬೆಳವಣಿಗೆಯ ಮುನ್ನಾ ಅಲ್ಲಿನ ಸರ್ಕಾರ ಯಾತ್ರೆ ಮಾಡಲು ಅನುಮತಿಯನ್ನು ನೀಡಿತ್ತು. ಆದರೇ, ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿತ್ತು.
ಧಾರ್ಮಿಕ ಆಚರಣೆಗಳಿಗಿಂತಲೂ ನಾಗರಿಕರ ಬದುಕುವ ಹಕ್ಕು ಮುಖ್ಯ. ಹಾಗಾಗಿ, ಕನ್ವರ್ ಯಾತ್ರೆಗೆ ಅನುಮತಿ ನೀಡಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು,’ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ ಕನ್ವರ್ ಸಂಘಗಳನ್ನು ಅಲ್ಲಿನ ಸರ್ಕಾರ ಮನವಿ ಮಾಡಿಕೊಂಡಿತ್ತು, ಸರ್ಕಾರ ಮನವಿಗೆ ಜುಲೈ 25ರಿಂದ ಆಗಸ್ಟ್ 6ರವರೆಗೆ ನಡೆಯಬೇಕಿದ್ದ ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿವೆ ಎಂದು ವರದಿಯಾಗಿವೆ.
ಇದನ್ನೂ ಓದಿ : ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ವಾರಂಬಳ್ಳಿ ಗ್ರಾಮದಲ್ಲಿ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್