ಲವ್ ಜಿಹಾದ್ ಕೇಸ್ ಎನ್ಐಎ ಬೇಕಾಗಿಲ್ಲ
Team Udayavani, Oct 8, 2017, 6:50 AM IST
ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಕೇರಳದ “ಲವ್ ಜಿಹಾದ್’ ಪ್ರಕರಣ ಇದೀಗ ಮತ್ತೂಂದು ತಿರುವು ಪಡೆದಿದೆ. ಹಿಂದೂ ಯುವತಿಯೊ ಬ್ಬಳು ಇಸ್ಲಾಂಗೆ ಮತಾಂತರವಾಗಿ ಮುಸ್ಲಿಂ ಯುವಕನನ್ನು ಮದುವೆಯಾಗಿರುವ ಕುರಿತು ಎನ್ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ತನಿಖೆ ಅಗತ್ಯವಿಲ್ಲ ಎಂದು ಕೇರಳ ಸರ್ಕಾರ ಶನಿವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ಹೇಳಿದೆ.
ಪ್ರಕರಣದ ತನಿಖೆಯನ್ನು ಕೇರಳ ಪೊಲೀಸರು ಸಮರ್ಥವಾಗಿಯೇ ನಡೆಸುತ್ತಿದ್ದಾರೆ. ಇದನ್ನು ಎನ್ಐಎಗೆ ಕೊಡುವ ಅಗತ್ಯವಿಲ್ಲ ಎಂದಿದೆ ಸರ್ಕಾರ. ಪ್ರಕರಣ ವನ್ನು ಎನ್ಐಎಗೆ ವಹಿಸುವ ನ್ಯಾಯಾಲಯದ ಆದೇಶವನ್ನು ಪಾಲಿಸಲು ನಾವು ಸಿದ್ಧರಿದ್ದೇವೆ. ಆದರೆ, ರಾಜ್ಯ ಪೊಲೀಸರ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದನ್ನು ಎನ್ಐಎಗೆ ವಹಿಸಬೇಕಾಗಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಸರ್ಕಾ ರದ ನಡೆಯನ್ನು ಕೇರಳದ ಬಿಜೆಪಿ ಘಟಕ ಟೀಕಿಸಿದೆ. ಕೇರಳ ಸರ್ಕಾರ ಭಯೋತ್ಪಾದಕ ಸಂಘಟನೆಗಳ ಕುರಿತು ಮೃದು ಧೋರಣೆ ಹೊಂದಿದೆ ಎಂದಿದೆ. ಅಲ್ಲದೇ ಈ ಪ್ರಕರಣ ವನ್ನು ಎನ್ಐಎಗೆ ಕೊಡಲು ಹಿಂದೇಟು ಹಾಕುತ್ತಿರು ವುದಕ್ಕೆ ನಿರ್ದಿಷ್ಟ ಕಾರಣ ನೀಡಬೇಕು ಎಂದು ಪಕ್ಷದ ಅಧ್ಯಕ್ಷ ಕಮ್ಮಾನಮ್ ರಾಜಶೇಖರನ್ ಆಗ್ರಹಿಸಿದ್ದಾರೆ.
ಈ ನಡುವೆ, ವಿವಾದದ ಕೇಂದ್ರ ಬಿಂದು ವಾಗಿರುವ ಯುವತಿ ಹಾದಿಯಾಗೆ ರಕ್ಷಣೆ ನೀಡಬೇಕೆಂದು ಮಹಿಳಾ ಸಂಘಟನೆಗಳು, ಬರಹಗಾರರು ಸಿಎಂ ವಿಜಯನ್ಗೆ ಪತ್ರ ಬರೆದಿದ್ದಾರೆ. ವಯಸ್ಕ ಮಹಿಳೆಯನ್ನು ಬಂಧನ ದಲ್ಲಿರಿ ಸುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅವರು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು