ಮುಸ್ಲಿಮರಿಗೆ ಭೂಮಿ ನೀಡಬೇಕಾಗಿಲ್ಲ: ಸುಪ್ರೀಂಗೆ ಹಿಂದೂ ಮಹಾಸಭಾ ಅರ್ಜಿ
Team Udayavani, Dec 10, 2019, 2:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆಂದು ಐದು ಎಕರೆ ಜಮೀನು ನೀಡಬೇಕಾದ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿ ಹಿಂದೂ ಮಹಾಸಭಾ ಸುಪ್ರೀಂ ಕೋರ್ಟ್ಗೆ ಸೋಮವಾರ ಅರ್ಜಿ ಸಲ್ಲಿಸಿದೆ.
ನ.9ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ 2.77 ಎಕರೆ ಜಮೀನು ರಾಮ ಲಲ್ಲಾನಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ ಕೇಂದ್ರ ಸರಕಾರ ಅಯೋಧ್ಯೆ ಸುತ್ತಮುತ್ತ ಐದು ಎಕರೆ ಜಮೀನನ್ನು ಮುಸ್ಲಿಮರಿಗೆ ನೀಡಬೇಕೆಂದು ತೀರ್ಪು ನೀಡಿತ್ತು.
ಈಗ ಮಸೀದಿ ನಿರ್ಮಿಸಲು ಜಮೀನು ನೀಡುವುದನ್ನು ಪ್ರಶ್ನಿಸಿ ಇದೇ ಮೊದಲ ಬಾರಿಗೆ ಹಿಂದೂ ಸಮುದಾಯದಿಂದ ಅರ್ಜಿ ಸಲ್ಲಿಕೆಯಾಗಿದೆ. ತೀರ್ಪಿನಲ್ಲಿ ಉಲ್ಲೇಖವಾಗಿರುವಂತೆ ವಿವಾದಿತ ಜಮೀನಿನ ಆಸುಪಾಸು ಹಿಂದೂಗಳಿಗೆ ಸೇರಿದ್ದು ಎಂದಿರುವಾಗ ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕವಾಗಿ ಐದು ಎಕರೆ ಜಮೀನು ನೀಡ ಬೇಕಾದ ಅಗತ್ಯವಿಲ್ಲ ಎಂದು ಹಿಂದೂ ಮಹಾಸಭಾದ ನ್ಯಾಯವಾದಿ ವಿಷ್ಣು ಶಂಕರ್ ಹೇಳಿದ್ದಾರೆ. ಈ ಅರ್ಜಿಯಿಂದಾಗಿ ನ.9ರ ತೀರ್ಪು ವಿರುದ್ಧ ಒಟ್ಟು 7 ಅರ್ಜಿಗಳು ಸಲ್ಲಿಕೆಯಾ ದಂತಾಗಿವೆ. ಈಗಾಗಲೇ ಮುಸ್ಲಿಂ ಸಮುದಾಯದಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ