ದಿಲ್ಲಿ ಸರಕಾರಕ್ಕೆ ಹೊಸ ಅಧಿಕಾರವಿಲ್ಲ:ಸುಪ್ರೀಂ ತೀರ್ಪು ಬಗ್ಗೆ ಜೇತ್ಲಿ
Team Udayavani, Jul 5, 2018, 3:31 PM IST
ಹೊಸದಿಲ್ಲಿ : ‘ದಿಲ್ಲಿ ಸರಕಾರದ ಮೇಲಿನ ನಿಯಂತ್ರಣ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷ ಸಂಭ್ರಮಿಸುವುದಕ್ಕೆ ಯಾವುದೇ ಕಾರಣಗಳಿಲ್ಲ; ಆಪ್ ಸರಕಾರಕ್ಕೆ ಈಗಲೂ ಐಎಎಸ್ ಅಧಿಕಾರಿಗಳ ವರ್ಗಾವಣೆಯನ್ನು ನಿಯಂತ್ರಿಸುವ ಅಥವಾ ತನಿಖಾ ಆಯೋಗವನ್ನು ಸ್ಥಾಪಿಸುವ ಕಾನೂನು ಸಮ್ಮತ ಅಧಿಕಾರಗಳು ಸುಪ್ರೀಂ ಕೋರ್ಟಿನ ತೀರ್ಪಿನಿಂದ ಪ್ರಾಪ್ತವಾಗಿಲ್ಲ’ ಎಂದು ಕೇಂದ್ರ ಸಚಿವ ಅರುಣ್ ಜೇತ್ಲಿ ಹೇಳಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ತೀರ್ಪು ನಿನ್ನೆ ಪ್ರಕಟವಾದೊಡನೆಯೇ ಆಮ್ ಆದ್ಮಿ ಪಕ್ಷ ತನಗಿನ್ನು ತನ್ನ ಇಷ್ಟಾನುಸಾರ ಸರಕಾರಿ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾಯಿಸುವ ಅಧಿಕಾರ ತನಗೆ ಪ್ರಾಪ್ತವಾಗಿದೆ ಎಂದು ಸಂಭ್ರಮಿಸಿತ್ತು.
ಅರುಣ್ ಜೇತ್ಲಿ ಅವರು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಮೂರು ಮುಖ್ಯ ಅಂಶಗಳನ್ನು ಗುರುತಿಸಿದ್ದಾರೆ: ಅವೆಂದರೆ 1. ದಿಲ್ಲಿ ಒಂದು ಕೇಂದ್ರಾಡಳಿತ ಪ್ರದೇಶ; 2. ಕೇಂದ್ರ ಸರಕಾರಕ್ಕೆ ಇಲ್ಲಿನ ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಯ ಮೇಲೆ ಏಕಮೇವ ಅಧಿಕಾರ ಇರುತ್ತದೆ; 3. ದಿಲ್ಲಿ ಸರಕಾರಕ್ಕೆ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾಯಿಸುವ ಅಧಿಕಾರ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ