ಎಲ್ಲರಿಗೂ ಲಸಿಕೆ ಅಗತ್ಯವಿಲ್ಲ: ಕೇಂದ್ರ
Team Udayavani, Dec 1, 2020, 10:12 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದ ಎಲ್ಲ ಜನರಿಗೆ ಕೋವಿಡ್ ಲಸಿಕೆ ನೀಡುವುದಾಗಿ ಹೇಳಿಲ್ಲ ಮತ್ತು ಎಲ್ಲರಿಗೂ ಅದರ ಅಗತ್ಯ ಇಲ್ಲ ಎಂದು ಮಂಗಳವಾರ ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ.
ಹೊಸದಿಲ್ಲಿಯಲ್ಲಿ ಮಂಗಳವಾರ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದ ಎಲ್ಲರಿಗೂ ಲಸಿಕೆ ನೀಡುವ ಬಗ್ಗೆ ಸರಕಾರ ಪ್ರಸ್ತಾವ ಮಾಡಿಲ್ಲ. ವೈಜ್ಞಾನಿಕವಾಗಿರುವ ಇಂಥ ವಿಚಾರಗಳ ಬಗ್ಗೆ ವಾಸ್ತವಿಕ ಅಂಶಗಳ ಸಹಿತ ಮಾತನಾಡುವುದು ಸೂಕ್ತ ಎಂದು ಹೇಳಿದ್ದಾರೆ. ದೇಶದ ಎಲ್ಲರಿಗೂ ಲಸಿಕೆ ನೀಡುವ ಅಗತ್ಯ ಇಲ್ಲ ಎಂದು ಅವರು ಹೇಳಿದ್ದಾರೆ. ನಮ್ಮ ಉದ್ದೇಶ ವೈರಸ್ನ ಸರಣಿಯನ್ನು ಮುರಿಯುವುದು. ಆಯ್ದ ಕೆಲವು ಮಂದಿಗೆ ಲಸಿಕೆ ನೀಡಿ, ಸೋಂಕು ಹಬ್ಬುವುದನ್ನು ತಡೆದರೆ ಎಲ್ಲರಿಗೂ ಅದನ್ನು ನೀಡುವ ಅಗತ್ಯವೇ ಬೀಳುವುದಿಲ್ಲ ಎಂದು ಐಸಿಎಂಆರ್ ಮಹಾ ನಿರ್ದೇಶಕ ಬಲರಾಮ ಭಾರ್ಗವ ಕೂಡ ಹೇಳಿದ್ದಾರೆ.
ಲಸಿಕೆ ಪ್ರಯೋಗ ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜೇಶ್ ಭೂಷಣ್, ಇದರಿಂದ ಲಸಿಕೆ ಮಾರುಕಟ್ಟೆಗೆ ಬರುವ ಪ್ರಕ್ರಿಯೆಗೆ ಬಾಧಕವಾಗುವುದಿಲ್ಲ ಎಂದರು. ಪ್ರಯೋಗಕ್ಕೆ ಒಳಗಾಗುವವರು ಮೊದಲು ಒಪ್ಪಂದಕ್ಕೆ ಸಹಿ ಹಾಕಬೇಕು. ಅದರನ್ವಯ ಪ್ರತಿಕೂಲ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಿಬೇಕು ಎಂದು ಭೂಷಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ