ಮುಂಬಯಿ ಆಕಾಶವಾಣಿಯಲ್ಲಿ ಕನ್ನಡಕ್ಕಿಲ್ಲ ಜಾಗ: ಆಕ್ರೋಶ
Team Udayavani, Nov 5, 2020, 6:11 AM IST
ಮುಂಬಯಿ: ಸುಮಾರು ಏಳು ದಶಕ ಗಳಿಗಿಂತಲೂ ಹೆಚ್ಚು ಕಾಲದಿಂದ ಕನ್ನಡ ಕಾರ್ಯ ಕ್ರಮಗಳನ್ನು ಪ್ರಸಾರ ಮಾಡುತ್ತಿದ್ದ ಮುಂಬಯಿ ಆಕಾಶವಾಣಿ ಸಂವಾದಿತ ವಾಹಿನಿಯಲ್ಲಿ ಏಕಾಏಕಿ ಕನ್ನಡ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದ್ದು, ಮುಂಬಯಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕೊರೊನಾ ಮಹಾಮಾರಿಯಿಂದ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಲಾಕ್ಡೌನ್ ನಿಮಿತ್ತ ಸಂವಾದಿತ ಸ್ಟೇಷನ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೋಮವಾರ ದಿಂದ ಎಲ್ಲ ಸಂವಾದಿತ ಸ್ಟೇಷನ್ಗಳು ಮತ್ತೆ ಪುನರಾರಂಭಗೊಂಡಿವೆ. ಆದರೆ ಕನ್ನಡ ಮತ್ತು ಸಿಂಧಿ ಭಾಷಾ ಕಾರ್ಯಕ್ರಮಗಳನ್ನು ಕೈಬಿಟ್ಟು ಉಳಿದ ಭಾಷೆಗಳನ್ನು ಪ್ರಾರಂಭಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ವಾರದ ಅರ್ಧ ಗಂಟೆಗೂ ಕತ್ತರಿ
ಏಳು ದಶಕಗಳಿಗಿಂತಲೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಕನ್ನಡ ರೇಡಿಯೋ ಸ್ಟೇಷನ್ನಲ್ಲಿ ಒಂದು ಕಾಲದಲ್ಲಿ ದಿನಂಪ್ರತಿ ಪ್ರಸಾರ ವಾಗುತ್ತಿದ್ದ ಕಾರ್ಯಕ್ರಮಗಳು ಅನಂತರದ ದಿನಗಳಲ್ಲಿ ವಾರಕ್ಕೆ ಮೂರು ಸಲ, ಬಳಿಕ ವಾರಕ್ಕೆ ಎರಡು ಬಾರಿ, ಕ್ರಮೇಣ ಒಂದು ಗಂಟೆಗೆ ಇಳಿದರೆ, ಕೆಲವು ವರ್ಷಗಳಿಂದ ವಾರಕ್ಕೆ ಅರ್ಧ ಗಂಟೆಯ ಕಾರ್ಯಕ್ರಮಗಳು ಪ್ರಸಾರವಾಗುತ್ತಿದ್ದವು. ಪ್ರಸ್ತುತ ಅದನ್ನೂ ಸ್ಥಗಿತಗೊಳಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕನ್ನಡಿಗ ಅಧಿಕಾರಿಗಳು ಇಲ್ಲವಂತೆ…!
ಕಾರ್ಯಕ್ರಮ ವಿಭಾಗದಲ್ಲಿ ಕನ್ನಡ ಭಾಷೆಯ ಅರಿವಿರುವ ಅಧಿಕಾರಿಗಳು ಇಲ್ಲದ ಕಾರಣ ಕನ್ನಡ ರೇಡಿಯೋ ಸ್ಟೇಷನ್ ಮುಚ್ಚಲಾಗಿದೆ ಎಂದು ಮುಂಬಯಿ ಆಕಾಶವಾಣಿ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಈ ಹೇಳಿಕೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಯಾಕೆಂದರೆ ಈ ಹಿಂದೆ ಕನ್ನಡ ಬಾರದ ಅಧಿಕಾರಿಗಳು ಈ ವಿಭಾಗವನ್ನು ನೋಡಿಕೊಳ್ಳುತ್ತಿದ್ದ ನಿದರ್ಶನಗಳು ಹಲವಾರಿವೆ.
ಕನ್ನಡಿಗರ ಆಕ್ರೋಶ
ಕನ್ನಡ ಕಾರ್ಯಕ್ರಮವನ್ನು ನಿಲ್ಲಿಸಿರುವ ಕುರಿತಂತೆ ಉದಯವಾಣಿ ಮುಂಬಯಿ ಆವೃತ್ತಿಯಲ್ಲಿ ಬುಧವಾರ ವರದಿ ಪ್ರಕಟವಾಗಿದ್ದು, ಕನ್ನಡಿಗರು ಆಕಾಶವಾಣಿಯ ನಿರ್ಧಾರ ಕುರಿತಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಹಿತಿಗಳು, ರಾಜಕಾರಣಿಗಳು ಕೂಡ ಕನ್ನಡ ಕಾರ್ಯಕ್ರಮ ಪುನರಾರಂಭಕ್ಕೆ ಆಗ್ರಹಿಸಿದ್ದಾರೆ.
ಮುಂಬಯಿ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡ ಕಾರ್ಯಕ್ರಮ ನಿಲ್ಲಿಸುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಅಧಿಕಾರಿಗಳ ಜತೆ ಚರ್ಚಿಸಿ ಕಾರ್ಯಕ್ರಮ ಪುನಾರಂಭಿಸಬೇಕೆಂದು ಒತ್ತಾಯಿಸುತ್ತೇನೆ.
– ಸಿ.ಟಿ. ರವಿ, ಕನ್ನಡ ಮತ್ತು ಸಂಸ್ಕೃತಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
MUST WATCH
ಹೊಸ ಸೇರ್ಪಡೆ
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ