![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಲೋಯಾ ಸಾವು: ಸ್ವತಂತ್ರ ತನಿಖೆ ಬೇಕಿಲ್ಲ
Team Udayavani, Apr 20, 2018, 9:50 AM IST
![Supreme-Court-of-India-650.jpg](https://www.udayavani.com/wp-content/uploads/2018/04/20/Supreme-Court-of-India-650-620x362.jpg)
ಹೊಸದಿಲ್ಲಿ: ನ್ಯಾಯಾಂಗ ವ್ಯವಸ್ಥೆಯಲ್ಲೇ ಮೊದಲ ಬಾರಿಗೆ ‘ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ’ಗೆ ಕಾರಣವಾಗಿದ್ದ ಸಿಬಿಐ ಕೋರ್ಟ್ನ ನ್ಯಾಯಾಧೀಶ ಲೋಯಾ ಕೇಸಿನ ಸ್ವತಂತ್ರ ತನಿಖೆ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ನ್ಯಾ| ಲೋಯಾ ಸಾವಿನ ಕೇಸಿನ ಬಗ್ಗೆ ತನಿಖೆಗಾಗಿ ಸಲ್ಲಿಸಿದ್ದ ಅರ್ಜಿಗಳು ಇಡೀ ನ್ಯಾಯಾಂಗ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಮತ್ತು ಪುಕಾರು ಹಬ್ಬಿಸುವ ಕೆಲಸ ಎಂದೂ ಮುಖ್ಯ ನ್ಯಾ| ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಖಡಕ್ಕಾಗಿ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯ ಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ನ್ಯಾ| ಲೋಯಾ ಸಾವಿನ ಕುರಿತಂತೆ ನಾಲ್ವರು ನ್ಯಾಯಾಧೀಶರು ದಾಖಲಿಸಿರುವ ಹೇಳಿಕೆಗಳ ಬಗ್ಗೆಯೂ ಯಾವುದೇ ಅನುಮಾನಪಡಬಾರದು ಎಂದಿದೆ. ಅಲ್ಲದೆ ಲೋಯಾ ಅವರದು ಸ್ವಾಭಾವಿಕ ಸಾವು ಎಂಬುದನ್ನು ದಾಖಲಾಗಿರುವ ಹೇಳಿಕೆಗಳು ಪುಷ್ಟೀಕರಿಸುತ್ತಿವೆ ಎಂದು ಪ್ರತಿಪಾದಿಸಿದೆ. ಸ್ವತಂತ್ರ ತನಿಖೆಗೆ ಸಲ್ಲಿಸಿದ ಅರ್ಜಿಗಳು ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ದಾಳಿ ನಡೆಸುವಂತಿವೆ. ರಾಜಕೀಯ ವಿರೋಧಿಗಳನ್ನು ಹಣಿಯಲು ಈ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠ ಕಟುವಾಗಿ ಹೇಳಿದೆ.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.