ಹೆಲ್ಮೆಟ್ ಇಲ್ಲದಿದ್ದರೆ ಪೂಜೆ ಇಲ್ಲ!
Team Udayavani, Jan 17, 2018, 7:19 AM IST
ಭುವನೇಶ್ವರ: ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ಮನವೊಲಿಸುವ ತರಹೇವಾರಿ ಪ್ರಯತ್ನಗಳು ದೇಶಾದ್ಯಂತ ನಡೆಯುತ್ತಲೇ ಇರುತ್ತವೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ, ಒಡಿಶಾದ ಪೊಲೀಸರು ಒಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ. ಜಗತ್ ಸಿಂಗ್ಪುರದ ಮಾ ಸರಳಾ ದೇಗುಲದಲ್ಲಿ ಹೆಲ್ಮೆಟ್ ಇಲ್ಲದಿದ್ದರೆ ಬೈಕ್ ಪೂಜೆ ಮಾಡುವುದಿಲ್ಲ ಎಂದು ಪೂಜಾರಿಗಳು ಘೋಷಿಸಿದ್ದಾರೆ. ಪೂಜೆ ಮಾಡಿಸಬೇಕೆಂದರೆ ಹೆಲ್ಮೆಟ್ ಕಡ್ಡಾಯಗೊಳಿಸಿದ್ದಾರೆ.
ಅರೆ, ಹೆಲ್ಮೆಟ್ಗೂ ಪೂಜೆಗೂ ಏನು ಸಂಬಂಧ ಎಂದು ಯೋಚಿಸುತ್ತಿದ್ದೀರಾ? ಬೈಕ್ ಖರೀದಿಸಿದವರು ಹಾಗೂ ಬಳಸುತ್ತಿರುವವರು ಹೆಲ್ಮೆಟ್ ಕೂಡ ಖರೀದಿಸಲಿ ಹಾಗೂ ತಪ್ಪದೇ ಧರಿಸಲಿ ಎಂಬುದೇ ಇದರ ಹಿಂದಿನ ಆಶಯ. ಜಗತ್ಸಿಂಗ್ಪುರದಲ್ಲಿ ನೋಂದಣಿಯಾಗುವ ಬಹುತೇಕ ದ್ವಿಚಕ್ರ ವಾಹನಗಳನ್ನು ಮೊದಲು ಇದೇ ದೇಗುಲಕ್ಕೆ ತಂದು ಪೂಜೆ ಮಾಡಿಸಲಾಗುತ್ತದೆ. ಅಷ್ಟೇ ಅಲ್ಲ, ಪ್ರತಿ ನಿತ್ಯ 10ಕ್ಕೂ ಹೆಚ್ಚು ಬೈಕ್ಗಳು ಇಲ್ಲಿಗೆ ಪೂಜೆಗಾಗಿ ಬರುತ್ತವೆ. ಅದರಲ್ಲೂ ಸಂಕ್ರಾಂತಿಯಂತಹ ವಿಶೇಷ ದಿನಗಳಂದು 50ಕ್ಕೂ ಜಾಸ್ತಿ ಬೈಕ್ಗಳು ಪೂಜೆಗಾಗಿ ಕ್ಯೂನಿಲ್ಲುತ್ತವೆ. ಈ ದೇಗುಲ ಸುಮಾರು 1 ಸಾವಿರ ಹಳೆಯದಾಗಿದ್ದು, ಸಾವಿರಾರು ಜನರು ರಾಜ್ಯದ ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ಆಗಮಿಸುತ್ತಾರೆ. ಹೀಗಾಗಿ ಒಡಿಶಾ ಪೊಲೀಸರು ಈ ನಿರ್ಧಾರ ಕೈಗೊಳ್ಳಲು ದೇವಾಲಯದ ಆಡಳಿತ ಮಂಡಳಿಯನ್ನು ಒಪ್ಪಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನ ಅರ್ಚಕ ಸುದಮ್ ಚರಣ ಪಾಂಡಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ವಾಹನ ಪೂಜೆ ಮಾಡಿಸಲು ಬರುವ ಪ್ರತಿಯೊಬ್ಬರೂ ಹೆಲ್ಮೆಟ್ ತರಲೇಬೇಕು. ಇಲ್ಲದಿದ್ದರೆ ಪೂಜೆಯೇ ಮಾಡಲ್ಲ ಎಂಬ ನಿಯಮ ಜಾರಿ ಮಾಡಿದ್ದಾರೆ. ಒಡಿಶಾದಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳ ಸಂಖ್ಯೆ ವಿಪರೀತ ಹೆಚ್ಚುತ್ತಿದ್ದು, ಇದನ್ನು ತಡೆಯುವಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು