ಪಶ್ಚಿಮ ಬಂಗಾಳದಲ್ಲಿ ಎನ್ ಆರ್ ಸಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ
Team Udayavani, Oct 23, 2019, 8:07 AM IST
ಸಿಲಿಗುರಿ: ಪಶ್ಚಿಮಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿಗೆ ತರಲು ಅನುಮತಿ ನೀಡುವುದಿಲ್ಲ, ಮಾತ್ರವಲ್ಲದೆ ಯಾವುದೇ ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚಿಸಿದ್ದಾರೆ.
ಆಡಳಿತಾತ್ಮಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಎನ್ ಆರ್ ಸಿ ಯನ್ನು ಪರಿಚಯಿಸುವ ಯೋಜನೆಯಿಲ್ಲ ಎಂದು ತಿಳಿಸಿದ್ದಾರೆ.
ಪ್ರಸ್ತುತ ಅಸ್ಸಾಂ ನಲ್ಲಿ ಬಿಜೆಪಿ ಸರ್ಕಾರವಿದ್ದು, ಅದ್ದರಿಂದ ಎನ್ ಆರ್ ಸಿಯನ್ನು ಕಾರ್ಯಗತಗೊಳಿಸಲು ಸಾಧ್ಯವಾಯಿತು. ಆದರೇ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸರ್ಕಾರ ಕೂಡ ನಮ್ಮದೆ ಇರುವುದರಿಂದ ಎನ್ ಆರ್ ಸಿ ಜಾರಿಗೊಳಿಸುವುದನ್ನು ವಿರೋಧಿಸುತ್ತಿದ್ದೇವೆ. ಅದರ ಜೊತೆಗೆ ನಾವು ಯಾವುದೇ ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಅಸ್ಸಾನಂತೆಯೇ ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿ ಶತಃಸಿದ್ಧ ಎಂದು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಕರ್ನಾಟಕ, ಮಹಾರಾಷ್ಟ್ರ ಸಹಿತ ಕೆಲವು ಕಡೆಗಳಲ್ಲಿ ನಿರಾ ಶ್ರಿತರ ಕೇಂದ್ರ ಸ್ಥಾಪನೆ ಮಾಡುವುದಾಗಿ ಅದಕ್ಕಾಗಿ ಸಿದ್ದತೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಕೂಡ ಇದೇ ಸಂದರ್ಭದಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!