Rahul Gandhi ಮನವಿ ತಿರಸ್ಕರಿಸಿದ ಕೋರ್ಟ್; ಮಾನನಷ್ಟ ಮೊಕದ್ದಮೆಯಲ್ಲಿ ರಿಲೀಫ್ ಇಲ್ಲ
ಮತ್ತೆ ಸಂಸತ್ ಸದಸ್ಯರನ್ನಾಗಿ ನೇಮಿಸಲು ಸಾಧ್ಯವಿಲ್ಲ...
Team Udayavani, Apr 20, 2023, 10:09 PM IST
ಸೂರತ್ : ರಾಹುಲ್ ಗಾಂಧಿ ಅವರಿಗೆ ಭಾರೀ ಹಿನ್ನಡೆ ಎಂಬಂತೆ ಗುಜರಾತ್ನ ನ್ಯಾಯಾಲಯವು ಗುರುವಾರ ಅವರ 2019 ರ “ಮೋದಿ ಉಪನಾಮ” ಹೇಳಿಕೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದೆ. ಅಂದರೆ ಸದ್ಯಕ್ಕೆ ರಾಹುಲ್ ಗಾಂಧಿ ಅವರನ್ನು ಮತ್ತೆ ಸಂಸತ್ ಸದಸ್ಯರನ್ನಾಗಿ ನೇಮಿಸಲು ಸಾಧ್ಯವಿಲ್ಲ.
ತನಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯದ ಆದೇಶದ ವಿರುದ್ಧದ ಮೇಲ್ಮನವಿ ಬಾಕಿ ಇರುವವರೆಗೆ ತನ್ನ ದೋಷಾರೋಪಣೆಯನ್ನು ತಡೆಹಿಡಿಯಬೇಕೆಂದು ರಾಹುಲ್ ಗಾಂಧಿ ಮನವಿ ಮಾಡಿದ್ದರು. ಆದರೆ ಇದಕ್ಕೆ ಸೂರತ್ನ ನ್ಯಾಯಾಲಯ ಒಪ್ಪಲಿಲ್ಲ.
ರಾಹುಲ್ ಗಾಂಧಿ ಅವರ ದೋಷಾರೋಪಣೆಯನ್ನು ತಡೆಹಿಡಿಯದೇ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ನಿರಾಕರಿಸುವ ಮೂಲಕ, ಬದಲಾಯಿಸಲಾಗದ ಹಾನಿ ಉಂಟಾಗುತ್ತದೆ ಎಂದು ಪ್ರದರ್ಶಿಸಲು ವಿಫಲರಾಗಿದ್ದಾರೆ” ಎಂದು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ರಾಬಿನ್ ಮೊಗೇರ ಹೇಳಿದ್ದಾರೆ.
ಸಾಂದರ್ಭಿಕ ಮತ್ತು ಯಾಂತ್ರಿಕ ರೀತಿಯಲ್ಲಿ ಅಲ್ಲ… ಅದು ನ್ಯಾಯಾಂಗದಲ್ಲಿ ಸಾರ್ವಜನಿಕ ವಿಶ್ವಾಸವನ್ನು ಅಲುಗಾಡಿಸುತ್ತದೆ” ಎಂದು ನ್ಯಾಯಾಧೀಶರು ಸುಪ್ರೀಂ ಕೋರ್ಟ್ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ