ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್ಶಿಪ್ ಇಲ್ಲ
9, 10ನೇ ತರಗತಿ ಮಕ್ಕಳಿಗಷ್ಟೇ ವಿದ್ಯಾರ್ಥಿವೇತನ
Team Udayavani, Nov 28, 2022, 7:00 PM IST
ಲಕ್ನೋ: ಉತ್ತರಪ್ರದೇಶದ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಇನ್ನು ಮುಂದೆ ಸ್ಕಾಲರ್ಶಿಪ್ಗೆ ಅರ್ಜಿ ಹಾಕುವಂತಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಈವರೆಗೆ ಬೇರೆ ಬೇರೆ ಕೋರ್ಸ್ಗಳಿಗೆ ಅನುಗುಣವಾಗಿ 1ರಿಂದ 5ನೇ ತರಗತಿವರೆಗಿನ ಮದರಸಾ ವಿದ್ಯಾರ್ಥಿಗಳಿಗೆ 1 ಸಾವಿರ ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು. ಕಳೆದ ವರ್ಷ 16.558 ಮದರಸಾಗಳ 5 ಲಕ್ಷದಷ್ಟು ಮಕ್ಕಳು ಈ ಸ್ಕಾಲರ್ಶಿಪ್ ಪಡೆದಿದ್ದರು.
ಆದರೆ, ಈಗ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರ, “1ರಿಂದ 8ರವರೆಗಿನ ಶಿಕ್ಷಣವನ್ನು ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತವಾಗಿ ಒದಗಿಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಮತ್ತು ಪುಸ್ತಕಗಳೂ ಉಚಿತವಾಗಿ ನೀಡಲಾಗುತ್ತಿದೆ.
ಹೀಗಿರುವಾಗ, ವಿದ್ಯಾರ್ಥಿವೇತನ ನೀಡಬೇಕಾದ ಅಗತ್ಯವಿಲ್ಲ’ ಎಂದಿದೆ. ಕೇವಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು