ದೇಶಾದ್ಯಂತ ಎನ್.ಆರ್.ಸಿ. ಸದ್ಯಕ್ಕಿಲ್ಲ : ಕೇಂದ್ರ ಗೃಹ ಸಚಿವ ಅಮಿತ್ ಶಾ ಯೂ ಟರ್ನ್


Team Udayavani, Dec 24, 2019, 8:31 PM IST

Amit-Shah-2-730

ನವದೆಹಲಿ: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಆರ್.ಸಿ.ಯನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೇಂದ್ರ ಸರಕಾರ ಸ್ವಲ್ಪ ತಣ್ಣಗಾದಂತೆ ತೋರುತ್ತಿದೆ. ಸಿಎಎ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎನ್.ಆರ್.ಸಿ.ಯನ್ನು ದೇಶವ್ಯಾಪಿ ಜಾರಿಗೊಳಿಸುವ ವಿಚಾರದಲ್ಲಿ ಮಾತ್ರ ಯೂಟರ್ನ್ ಹೊಡೆದಿದ್ದಾರೆ.

ಇದಕ್ಕೂ ಮೊದಲು ಎನ್.ಆರ್.ಸಿ.ಯನ್ನು ರಾಷ್ಟ್ರಾದ್ಯಂತ ಜಾರಿಗೊಳಿಸಿಯೇ ಸಿದ್ಧ ಎಂದು ಹೇಳುತ್ತಿದ್ದ ಅಮಿತ್ ಶಾ ಅವರು ಇಂದು ತನ್ನ ಹೇಳಿಕೆಯನ್ನು ಬದಲಿಸಿದ್ದಾರೆ. ಎನ್.ಆರ್.ಸಿ. ಜಾರಿ ಕುರಿತಾಗಿ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲದಿರುವ ಕಾರಣದಿಂದ ಈ ಕುರಿತಾಗಿ ಸದ್ಯಕ್ಕೆ ಮಾತುಕತೆಗಳನ್ನು ನಡೆಸುವುದು ಸಮಂಜಸವಲ್ಲ ಎಂದು ಅವರು ಎ.ಎನ್.ಐ. ಜೊತೆ ಮಾತನಾಡುತ್ತ ತಿಳಿಸಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆದಿತ್ಯವಾರದಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಧನ್ಯವಾದ ಸಮಾವೇಶದಲ್ಲಿ ಮಾತನಾಡುತ್ತಾ ಎನ್.ಆರ್.ಸಿ. ಹಾಗೂ ಡಿಟೆನ್ಷನ್ ಕ್ಯಾಂಪ್ ಗಳ ಕುರಿತಾಗಿ ಪ್ರತಿಪಕ್ಷಗಳು ದೇಶದ ಜನರಲ್ಲಿ, ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಮುದಾಯದವರಲ್ಲಿ ಅನಗತ್ಯ ಭೀತಿಯನ್ನು ಹುಟ್ಟುಹಾಕುತ್ತಿವೆ ಎಂದು ಕಿಡಿ ಕಾರಿದ್ದರು. ಮಾತ್ರವಲ್ಲದೇ ಸಿಎಎ ಮತ್ತು ಎನ್.ಆರ್.ಸಿ.ಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಪ್ರಧಾನಿ ಅವರು ಈ ಸಮಾವೇಶದಲ್ಲಿ ಹೇಳಿದ್ದರು.

ಪ್ರಧಾನಿ ಅವರ ಈ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪವನ್ನು ವ್ಯಕ್ತಪಡಿಸಿದ್ದವು. ಒಂದು ಕಡೆಯಲ್ಲಿ ಗೃಹಸಚಿವ ಅಮಿತ್ ಶಾ ಅವರು ದೇಶಾದ್ಯಂತ ಎನ್.ಆರ್.ಸಿ.ಯನ್ನು ಜಾರಿಗೊಳಿಸಿಯೇ ಸಿದ್ಧ ಎಂದು ತಮ್ಮ ಎಲ್ಲಾ ಭಾಷಣಗಳಲ್ಲಿ ಮತ್ತು ಸಂದರ್ಶನಗಳಲ್ಲಿ ಹೇಳಿಕೊಂಡು ಬರುತ್ತಿದ್ದಾರೆ. ಮತ್ತು ಶಾ ಅವರು ಸಂಸತ್ತಿನಲ್ಲೂ ಈ ಕುರಿತು ಪ್ರಸ್ತಾಪಿಸಿದ್ದರು ಎಂದು ಪ್ರತಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು.

ಪ್ರತಿಪಕ್ಷಗಳ ಈ ಆರೋಪಕ್ಕೆ ಉತ್ತರವೆಂಬಂತೆ ಅಮಿತ್ ಶಾ ಅವರ ಈ ಹೇಳಿಕೆ ಮೂಡಿಬಂದಿದೆ. ‘ಪ್ರಧಾನಿ ಮೋದಿ ಅವರು ಹೇಳಿದ್ದು ಸರಿಯಾಗಿಯೇ ಇದೆ. ಎನ್.ಆರ್.ಸಿ. ಕುರಿತಾಗಿ ಕೇಂದ್ರ ಸಚಿವ ಸಂಪುಟದಲ್ಲಾಗಲೀ, ಸಂಸತ್ತಿನಲ್ಲಾಗಲೀ ಇದುವರೆಗೂ ಚರ್ಚೆಯೇ ನಡೆದಿಲ್ಲ’ ಎಂದು ಅಮಿತ್ ಶಾ ಅವರು ತಮ್ಮ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು ನಾಗರಿಕರ ರಾಷ್ಟ್ರೀಯ ನೋಂದಣಿಗೂ (NRC), ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೂ (NPR) ಯಾವುದೇ ಸಂಬಂಧವಿಲ್ಲ ಎಂಬುದಾಗಿ ಅಮಿತ್ ಶಾ ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 2020ರಲ್ಲಿ ಎನ್.ಪಿ.ಆರ್. ನಡೆಸುವುದಾಗಿ ಕೇಂದ್ರ ಸರಕಾರ ಇಂದು ಘೋಷಿಸಿದೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.