ರಾಷ್ಟ್ರೀಯ ಲಾಂಛನ: ಸುಪ್ರೀಂ ಕೋರ್ಟ್ನಿಂದ ಪಿಐಎಲ್ ವಜಾ
Team Udayavani, Sep 30, 2022, 8:15 PM IST
ನವದೆಹಲಿ: ರಾಷ್ಟ್ರ ರಾಜಧಾನಿಯ ಸೆಂಟ್ರಲ್ ವಿಸ್ತಾದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕಾಗಿ ಸಿದ್ಧಗೊಂಡಿರುವ ರಾಷ್ಟ್ರೀಯ ಲಾಂಛನವು 2005ರ ಭಾರತದ ಲಾಂಛನ(ಅಸಮರ್ಪಕ ಬಳಕೆ ನಿಷೇಧ) ಕಾಯ್ದೆಯನ್ನು ಉಲ್ಲಂಘಿ ಸಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ಆರ್.ಶಾ ಮತ್ತು ನ್ಯಾ. ಕೃಷ್ಣ ಮುರಾರಿ ಅವರನ್ನು ಒಳಗೊಂಡ ನ್ಯಾಯಪೀಠ, “ಅನಿಸಿಕೆಯು ವ್ಯಕ್ತಿಯ ಮನಸ್ಸಿನ ಮೇಲೆ ಅವಲಂಬಿತವಾಗಿರುತ್ತದೆ. ಇಲ್ಲಿ ಕಾಯ್ದೆಯ ಉಲ್ಲಂಘನೆ ಆಗಿಲ್ಲ,’ ಎಂದು ಸ್ಪಷ್ಟಪಡಿಸಿತು.
ನೂತನವಾಗಿ ಸಿದ್ಧಗೊಂಡಿರುವ ರಾಷ್ಟ್ರೀಯ ಲಾಂಛನದಲ್ಲಿ ಸಿಂಹಗಳು ಉಗ್ರ ಮತ್ತು ಆಕ್ರಮಣಕಾರಿಯಾಗಿ ಕಾಣುತ್ತಿದೆ.
ಸಾರನಾಥದಲ್ಲಿ ಇರುವ ಸಾಮ್ರಾಟ್ ಅಶೋಕನ ಲಾಂಛನದಲ್ಲಿ ಇದ್ದಂತೆ ಸಿಂಹಗಳು ಸೌಮ್ಯವಾಗಿಲ್ಲ ಎಂದು ಆರೋಪಿಸಿ ಇಬ್ಬರು ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ