ಮೋದಿ ಕ್ಷಮೆಗೆ ಪಟ್ಟು; ಕಾಂಗ್ರೆಸ್ ವಿರುದ್ಧ ನಾಯ್ಡು ಕೆಂಡಾಮಂಡಲ
Team Udayavani, Dec 20, 2017, 1:59 PM IST
ಚಿಕ್ಕಮಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚೋದಿತ ಆರೋಪ ಮಾಡಿದ್ದಕ್ಕೆ ಪ್ರತಿಯಾಗಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಸದಸ್ಯರು ರಾಜ್ಯಸಭೆಯಲ್ಲಿ ಬುಧವಾರ ತೀವ್ರ ಕೋಲಾಹಲ ನಡೆಸಿದ್ದಕ್ಕೆ ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಕೆಂಡಾಮಂಡಲರಾದ ಘಟನೆ ನಡೆಯಿತು.
ಇದು ಸರಿಯಾದ ಕ್ರಮವಲ್ಲ. ಯಾರೊಬ್ಬರು ಕ್ಷಮೆ ಕೇಳಬೇಕಾದ ಅಗತ್ಯವಿಲ್ಲ, ಸದನದೊಳಗೆ ಏನೂ ನಡೆದಿಲ್ಲ. ಯಾವುದೇ ಹೇಳಿಕೆಯನ್ನು ಇಲ್ಲಿ ಕೊಟ್ಟಿಲ್ಲ ಎಂದು ರಾಜ್ಯಸಭಾಧ್ಯಕ್ಷ ನಾಯ್ಡು ಅವರು ಕಾಂಗ್ರೆಸ್ ಸದಸ್ಯ ವಿರುದ್ಧ ಈ ರೀತಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಲೋಕಸಭೆಯಲ್ಲೂ ಬುಧವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ಸದಸ್ಯರು ಬಾವಿ ಬಳಿ ತೆರಳಿ ತೀವ್ರ ಗದ್ದಲ ನಡೆಸಿದರು. ಬಳಿಕ ಪ್ರಶ್ನೋತ್ತರ ಅವಧಿಯಲ್ಲೂ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದು ಕೋಲಾಹಲ ಎಬ್ಬಿಸಿದ್ದರು.
ಎರಡು ಬಾರಿಯೂ ಲೋಕಸಭಾ ಸ್ಪೀಕರ್ ಅವರು ಕಲಾಪವನ್ನು ಮುಂದೂಡಿದರು. ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನ ಜತೆ ಕೈಜೋಡಿಸಿದ್ದ ಕಾಂಗ್ರೆಸ್ ಪಕ್ಷ ರಹಸ್ಯ ಸಭೆಯೊಂದನ್ನು ನಡೆಸಿತ್ತು, ಅದರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಭಾಗವಹಿಸಿದ್ದರು ಎಂದು ಪ್ರಧಾನಿ ಮೋದಿ ಅವರು ಬಹಿರಂಗಸಭೆಯಲ್ಲಿ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ