ಟ್ವಿನ್‌ ಟವರ್‌ ಇದ್ದ ಸ್ಥಳದಲ್ಲಿ ಈಗ ಧೂಳಿನ ಹೊದಿಕೆ

ಸಮರೋಪಾದಿಯಲ್ಲಿ ನಡೆಯುತ್ತಿದೆ ಸ್ವಚ್ಛತಾ ಕಾರ್ಯ

Team Udayavani, Aug 30, 2022, 6:45 AM IST

ಟ್ವಿನ್‌ ಟವರ್‌ ಇದ್ದ ಸ್ಥಳದಲ್ಲಿ ಈಗ ಧೂಳಿನ ಹೊದಿಕೆ

ನೋಯ್ಡಾ:ಉತ್ತರಪ್ರದೇಶದ ನೋಯ್ಡಾದಲ್ಲಿ ಸೂಪರ್‌ಟೆಕ್‌ನ ಅವಳಿ ಕಟ್ಟಡಗಳು ತಲೆಎತ್ತಿ ನಿಂತಿದ್ದ ಪ್ರದೇಶದಲ್ಲಿ ಈಗ ತ್ಯಾಜ್ಯದ ದೊಡ್ಡ ಪರ್ವತವೇ ಸೃಷ್ಟಿಯಾಗಿದೆ. ಈ ತ್ಯಾಜ್ಯದ ವಿಲೇವಾರಿಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಟ್ವಿನ್‌ ಟವರ್‌ಗಳು ನೆಲಸಮಗೊಂಡ ಪ್ರದೇಶದ ಸುತ್ತಮುತ್ತಲೂ ಧೂಳಿನ ದಟ್ಟ ಪದರ ಸೃಷ್ಟಿಯಾಗಿದೆ. ಮರಗಿಡಗಳು, ಕಟ್ಟಡಗಳು, ರಸ್ತೆಗಳು ಧೂಳಿನ ಹೊದಿಕೆಯಲ್ಲಿ ಕಣ್ಮರೆಯಾಗಿದ್ದು, ಸೋಮವಾರ ಮುಂಜಾನೆಯಿಂದಲೇ ಸ್ವಚ್ಛತಾ ಕೆಲಸವನ್ನು ಸಮರೋಪಾದಿಯಲ್ಲಿ ಆರಂಭಿಸಲಾಗಿದೆ.

ಅವಳಿ ಕಟ್ಟಡದ ಸುತ್ತಲಿದ್ದ ಮರಗಿಡಗಳು ಹಾಗೂ ರಸ್ತೆಗಳಿಗೆ ನೀರನ್ನು ಸಿಂಪಡಣೆ ಮಾಡಲಾಗುತ್ತಿದೆ ಎಂದು ನೋಯ್ಡಾ ಪ್ರಾಧಿಕಾರದ ಸಿಇಒ ರಿತು ಮಾಹೇಶ್ವರಿ ತಿಳಿಸಿದ್ದಾರೆ.ಇದಕ್ಕಾಗಿ ಭಾರೀ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಮೀಪದ ಎಮೆರಾಲ್ಟ್ ಕೋರ್ಟ್‌ ಮತ್ತು ಎಟಿಎಸ್‌ ವಿಲೇಸ್‌ ಸೊಸೈಟಿಯ ನಿವಾಸಿಗಳಲ್ಲಿ ಕೆಲವು ಭಾನುವಾರ ರಾತ್ರಿಯೇ ತಮ್ಮ ತಮ್ಮ ಮನೆಗಳಿಗೆ ಮರಳಿದ್ದರೆ, ಇನ್ನೂ ಕೆಲವರು ಸೋಮವಾರ ಮುಂಜಾನೆ ವಾಪಸಾಗಿದ್ದಾರೆ. ಕಟ್ಟಡ ನೆಲಸಮ ಹಿನ್ನೆಲೆಯಲ್ಲಿ ಸುಮಾರು 5 ಸಾವಿರ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿತ್ತು. ಈ ಪೈಕಿ ಶೇ.75ರಷ್ಟು ಮಂದಿ ತಮ್ಮ ಮನೆಗಳಿಗೆ ಮರಳಿದ್ದಾರೆ.

ಭಾರತ ಸೇರ್ಪಡೆ:
ಸೂಪರ್‌ಟೆಕ್‌ ಅವಳಿ ಕಟ್ಟಡಗಳನ್ನು ಯಶಸ್ವಿಯಾಗಿ ಕೆಡವುವ ಮೂಲಕ ಭಾರತವು 100 ಮೀಟರ್‌ಗಿಂತ ಎತ್ತರದ ಕಟ್ಟಡಗಳನ್ನು ನೆಲಸಮಗೊಳಿಸಿದ ದೇಶಗಳ ಕ್ಲಬ್‌ಗೆ ಸೇರ್ಪಡೆಯಾಗಿದೆ. ಇದರ ಹೆಗ್ಗಳಿಕೆಯು ಎಡಿಫೈಸ್‌ ಎಂಜಿನಿಯರಿಂಗ್‌ನ ಇಡೀ ತಂಡಕ್ಕೆ ಸಲ್ಲುತ್ತದೆ ಎಂದು ದಕ್ಷಿಣ ಆಫ್ರಿಕಾದ ಸಂಸ್ಥೆ ಜೆಟ್‌ ಡೆಮಾಲಿಷನ್ಸ್‌ನ ಜೋ ಬ್ರಿಂಕ್‌ಮನ್‌ ಹೇಳಿದ್ದಾರೆ.

ಮುಂಬೈ ಕಟ್ಟಡಗಳ ಆಡಿಟ್‌ ನಡೆಯಲಿ
ನೋಯ್ಡಾ ಕಟ್ಟಡ ನೆಲಸಮ ಬೆನ್ನಲ್ಲೇ ಮುಂಬೈನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಗಗನಚುಂಬಿ ಕಟ್ಟಡಗಳ ಆಡಿಟ್‌ ನಡೆಸಬೇಕೆಂದು ಬಿಜೆಪಿ ನಾಯಕ ಕಿರಿಟ್‌ ಸೋಮಯ್ಯ ಆಗ್ರಹಿಸಿದ್ದಾರೆ. ಫ್ಲ್ಯಾಟ್‌ ಮಾಲೀಕರ ಹಿತಾಸಕ್ತಿಯ ರಕ್ಷಣೆಗಾಗಿ ಇಂಥ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಏಕನಾಥ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ಸೋಮಯ್ಯ ಮನವಿ ಮಾಡಿದ್ದಾರೆ. ಈ ನಡುವೆ, ಸೋಮವಾರ ಮಾತನಾಡಿರುವ ಉತ್ತರಪ್ರದೇಶ ಮಾಜಿ ಸಿಎಂ, ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌, “ನೋಯ್ಡಾದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿದ ಸೂಪರ್‌ಟೆಕ್‌ನ ಬಿಲ್ಡರ್‌ಗಳ ವಿರುದ್ಧ ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲವೇಕೆ’ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.