ಇಬ್ಬರು ಬಿಜೆಪಿ ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
Team Udayavani, Aug 19, 2017, 4:23 PM IST
ಮುಜಫರನಗರ : ಐದು ವರ್ಷಗಳ ಹಿಂದೆ ರೈಲು ಸೇವೆಗಳನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿದ ಕೇಸಿನಲ್ಲಿ ಕೋರ್ಟಿಗೆ ಹಾಜರಾಗದ ಇಬ್ಬರು ಬಿಜೆಪಿ ಶಾಸಕರ ವಿರುದ್ಧ ಇಲ್ಲಿನ ಸ್ಥಳೀಯ ನ್ಯಾಯಾಲಯ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಪ್ರಾಸಿಕ್ಯೂಶನ್ ನೀಡಿರುವ ಮಾಹಿತಿಯ ಪ್ರಕಾರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಗೋಪಾಲ್ ತಿವಾರಿ ಅವರು ಇಬ್ಬರು ಬಿಜೆಪಿ ಶಾಸಕರಾಗಿರುವ ಕಪಿಲ್ ಅಗ್ರವಾಲ್ (ಮುಜಫರನಗರ ಕ್ಷೇತ್ರ) ಮತ್ತು ಉಮೇಶ್ ಮಲಿಕ್ (ಬುಢಾನಾ ಕ್ಷೇತ್ರ) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದಾರೆ.
ಕೇಸಿಗೆ ಸಂಬಂಧಿಸಿದಂತೆ ಈ ಇಬ್ಬರು ಶಾಸಕರನ್ನು ಸೆ.30ರಂದು ಕೋರ್ಟಿನಲ್ಲಿ ಹಾಜರುಪಡಿಸುವಂತೆ ನ್ಯಾಯಾಧೀಶರು ಪೊಲೀಸರಿಗೆ ಆದೇಶಿಸಿದ್ದಾರೆ.
2012ರ ಎಪ್ರಿಲ್ 3ರಂದು ರೈಲು ಸೇವೆ ತಡೆದ ಪ್ರಕರಣಕ್ಕೆ ಸಂಬಂಧಿಸಿ ರೈಲ್ವೇ ಪೊಲೀಸರು ಈ ಇಬ್ಬರು ಶಾಸಕರ ಸಹಿತ ಹಲವಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ