ಚಳಿಗೆ ನಡುಗಿದ ಉತ್ತರ ಭಾರತ; ಜನಜೀವನ ಅಸ್ತವ್ಯಸ್ತ
Team Udayavani, Dec 27, 2022, 1:43 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಸಹಿತ ಉತ್ತರ ಭಾರತದ ಹಲವು ಸ್ಥಳಗಳಲ್ಲಿ ಚಳಿ ಪ್ರಮಾಣ ತೀವ್ರ ಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ ಮುಂದಿನ ಕೆಲವು ದಿನಗಳ ವರೆಗೆ ಪ್ರತಿಕೂಲ ಹವಾಮಾನದ ಪರಿಸ್ಥಿತಿ ಮುಂದುವರಿಯಲಿದೆ. ದಟ್ಟವಾಗಿ ಮಂಜು ಮುಸುಕಿದ ವಾತಾವರಣವೂ ಇರಲಿದೆ.
ಹೊಸದಿಲ್ಲಿಯಲ್ಲಿ ತಾಪಮಾನ 10 ಡಿ.ಸೆ.ಗೆ ಇಳಿದಿದೆ. ದಟ್ಟ ಮಂಜುಕವಿದ ಕಾರಣದಿಂದ 50 ಮೀಟರ್ನಿಂದ ಆಚೆಗೆ ಇರುವ ವಸ್ತು ಮತ್ತು ದಾರಿ ಕಾಣದೇ ಇರುವ ಸ್ಥಿತಿ ಇದೆ. ಹೀಗಾಗಿ ಹೊಸ ದಿಲ್ಲಿ ಯಿಂದ ತೆರಳುವ ಹಲವು ರೈಲುಗಳು ವಿಳಂಬವಾಗಿ ಪ್ರಯಾಣಿಸುತ್ತಿವೆ.
ಹರಿಯಾಣದ ಹಿಸ್ಸಾರ್ನಲ್ಲಿ ಕನಿಷ್ಠ ತಾಪಮಾನ 2.5 ಡಿ.ಸೆ. ದಾಖಲಾಗಿದೆ. ಅಂಬಾಲಾದಲ್ಲಿ 7.7 ಡಿ.ಸೆ., ಕರ್ನಾಲ್ನಲ್ಲಿ 6.8 ಡಿ.ಸೆ. ತಾಪಮಾನ ದಾಖಲಾಗಿದೆ.
ರಾಜಸ್ಥಾನದಲ್ಲಿ ಕೂಡ ಚಳಿಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಫತೇಪುರ್ನಲ್ಲಿ ಭಾರೀ ಪ್ರಮಾಣದಲ್ಲಿ ತಾಪಮಾನ ಕುಸಿತ ಗೊಂಡಿದೆ. ರಾಜ್ಯದ ಹಲವು ಭಾಗಗಳಲ್ಲಿ 16 ಡಿ.ಸೆ.ನಿಂದ 25 ಡಿ.ಸೆ. ವರೆಗೆ ತಾಪಮಾನ ಇದೆ.
ಪಂಜಾಬ್ನ ಹಲವು ಭಾಗಗಳಲ್ಲಿಯೂ ಶೀತ ಹವೆ ಯಿಂದ ಜನಜೀವನಕ್ಕೆ ಧಕ್ಕೆ ಉಂಟಾಗಿದೆ. ಅಮೃತ ಸರದಲ್ಲಿ 6.5 ಡಿ.ಸೆ., ಲುಧಿಯಾನಾದಲ್ಲಿ 6 ಡಿ.ಸೆ. ತಾಪಮಾನ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!