ಇದೊಂದು ವ್ಯವಸ್ಥಿತ ಪಿತೂರಿ : ಸಿಎಂ ಮಮತಾ ಬ್ಯಾನರ್ಜಿ ಆರೋಪ
Team Udayavani, Mar 10, 2021, 8:29 PM IST
ಕೋಲ್ಕತ್ತಾ : ಸಾರ್ವಜನಿಕರೆದುರೇ ನಾಲ್ಕೈದು ಜನ ನನ್ನ ಮೇಲೆ ಹಲ್ಲೆ ನಡೆಸಿದರು. ಈ ಘಟನೆ ವೇಳೆ ಯಾವೊಬ್ಬ ಪೊಲೀಸ್ ಅಧಿಕಾರಿಯೂ ಇರಲಿಲ್ಲ. ಇದೊಂದು ವ್ಯವಸ್ಥಿತವಾದ ಪಿತೂರಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಿಂದ ಸ್ಪರ್ಧಿಸಲು ಬುಧವಾರ(ಮಾರ್ಚ್ 10) ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸಲು ತೆರಳಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಅವರ ಕಾಲಿಗೆ ಪೆಟ್ಟಾಗಿದೆ ಎನ್ನಲಾಗುತ್ತಿದೆ.
ಘಟನೆ ಕುರಿತು ಆಕ್ರೋಶ ಹೊರಹಾಕಿರುವ ದೀದಿ, 4-5 ಗಂಟೆಯವರೆಗೆ ದೊಡ್ಡ ಕಾರ್ಯಕ್ರಮ ನಡೆದರೂ ಕೂಡ ಯಾವೊಬ್ಬ ಸ್ಥಳೀಯ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಸಾಕಷ್ಟು ಜನರು ಸೇರಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯೂ ಹಾಜರಿರಲಿಲ್ಲ. ಇದೊಂದು ಪಿತೂರಿ ಎಂದು ನನಗೆ ಅನ್ನಿಸುತ್ತಿದೆ. ಘಟನೆ ಕುರಿತು ಚುನಾವಣೆ ಆಯೋಗದ ಗಮನಕ್ಕೆ ತರುತ್ತೇನೆ ಎಂದರು.
ಇನ್ನು ಘಟನೆ ಬಳಿಕ ಕಾರಿನಲ್ಲಿ ಕುಳಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೀದಿ, ತನ್ನ ಕಾಲಿಗೆ ಬಲವಾದ ನೋವು ಆಗಿದೆ ಎಂದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ಕಷ್ಟಪಡುತ್ತಿದ್ದರು.
#WATCH:”Not even one Police official was present. 4-5 people intentionally manhandled me in presence of public. No local police present during program not even SP. It was definitely a conspiracy. There were no police officials for 4-5 hrs in such huge public gathering” says WB CM pic.twitter.com/wJ9FbL96nX
— ANI (@ANI) March 10, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್