ಹೊಸ ಪಕ್ಷ ಇಲ್ಲ,ಎಸ್ಪಿ ಒಂದಾಗಿಯೇ ಇರಲಿದೆ: ಮುಲಾಯಂ ಸಿಂಗ್
Team Udayavani, Jan 11, 2017, 3:00 PM IST
ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಕಲಹ ತೀವ್ರವಾಗಿರುವ ಬೆನ್ನಲ್ಲೇ ಪಕ್ಷವನ್ನು ಒಗ್ಗಟ್ಟಾಗಿರಲು ಮುಲಾಯಂ ಸಿಂಗ್ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮುಲಾಯಂ ಸಿಂಗ್ ‘ನಮ್ಮ ಪಕ್ಷವನ್ನು ಕಟ್ಟಿ ಬೆಳೆಸಲು ಹಲವು ಹಿರಿಯರು ಶ್ರಮ ಪಟ್ಟಿದ್ದಾರೆ. ಹಲವು ಹೋರಾಟಗಳ ನಂತರ ಪಕ್ಷವನ್ನು ಕಟ್ಟಲಾಗಿದೆ. ಪಕ್ಷದ ಕಾರ್ಯಕರ್ತರು ಕಷ್ಟಗಳನ್ನು ಎದುರಿಸಿದ್ದಾರೆ. ನಾನು ತುರ್ತು ಪರಿಸ್ಥಿತಿಯ ವೇಳೆ ಜೈಲು ಪಾಲಾಗಿದ್ದೆ, ಆವಾಗ ಅಖೀಲೇಶ್ 2.5 ವರ್ಷದ ಮಗುವಿದ್ದ’ ಎಂದರು.
‘ನಾನು ಎಲ್ಲವನ್ನೂ ದೇಶಕ್ಕಾಗಿ ಮಾಡುತ್ತಿದ್ದೇನೆ. ಬೇರೆ ಯಾವುದಕ್ಕಾಗಿ ನಾನು ಹೋರಾಡಲಿ’ ಎಂದು ಪ್ರಶ್ನಿಸಿದ ಮುಲಾಯಂ ‘ನಮ್ಮ ಪಕ್ಷವನ್ನು ಒಡೆಯಲು ಯಾರು ಕುತಂತ್ರ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ನಮ್ಮ ಪಕ್ಷ ಒಗ್ಗಟ್ಟಾಗಿ ಇರುವ ವಿಶ್ವಾಸ ನನಗಿದೆ .ಜನತೆ ಮತ್ತು ಕಾರ್ಯಕರ್ತರು ಪಕ್ಷವನ್ನು ಒಗ್ಗಟ್ಟಾಗಿ ಇಡಲಿದ್ದಾರೆ. ಪಕ್ಷದ ಹೆಸರಾಗಲಿ ಚಿಹ್ನೆಯಾಗಲಿ ಬದಲಾಗಲಿ, ನನ್ನ ಸೈಕಲ್ ಮಾತ್ರ ನನ್ನೊಂದಿಗೆ ಇರುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ