ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭಕ್ಕೆ ವಿಜೇತರಿಂದ ಬಹಿಷ್ಕಾರ ?


Team Udayavani, May 3, 2018, 3:52 PM IST

Smriti-Irani1-700.jpg

ಹೊಸದಿಲ್ಲಿ : ರಾಷ್ಟ್ರಪತಿ ರಾಮ ನಾಥ್‌ ಕೋವಿಂದ್‌ ಅವರು 11 ಚಲನಚಿತ್ರ ರಾಷ್ಟ್ರಪ್ರಶಸ್ತಿಗಳನ್ನು ಮಾತ್ರವೇ ವಿತರಿಸುವರೆಂಬ ಕೊನೇ ಕ್ಷಣದ ಪ್ರಕಟನೆಯಿಂದ ಸಖೇದಾಶ್ಚರ್ಯಗೊಂಡಿರುವ 70ಕ್ಕೂ ಅಧಿಕ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರು ಇಂದು ತಡ ಸಂಜೆ ನಡೆಯಲಿರುವ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿರುವುದಾಗಿ ವರದಿಯಾಗಿದೆ.

ಪ್ರಶಸ್ತಿ ವಿಜೇತರ ಕೊನೇ ಕ್ಷಣದ ಪ್ರಶ್ನೆಗಳಿಗೆ ಅಚ್ಚರಿ ವ್ಯಕ್ತಪಡಿಸಿ ರಾಷ್ಟ್ರಪತಿ ಭವನ ಹೊರಡಿಸಿರುವ ಪ್ರಕಟನೆಯೊಂದರಲ್ಲಿ “ರಾಷ್ಟ್ರಪತಿಗಳು ಗರಿಷ್ಠ ಒಂದು ತಾಸಿನ ಸರ್ವಪ್ರಶಸ್ತಿ ಪ್ರದಾನದ ಶಿಷ್ಟಾಚಾರದ ಸಮಾರಂಭದಲ್ಲಿ ಭಾಗವಹಿಸುತ್ತಾರೆ’ ಎಂದು ಹೇಳಿದೆಯಲ್ಲದೆ ಈ ಮಾಹಿತಿಯನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ  ಈ ಮೊದಲೇ ತಿಳಿಸಲಾಗಿದೆ ಎಂದು ಹೇಳಿದೆ. ರಾಷ್ಟ್ರಪತಿಯವರ ಮಾಧ್ಯಮ ಕಾರ್ಯದರ್ಶಿ ಅಶೋಕ್‌ ಮಲಿಕ್‌ ಈ ವಿಷಯವನ್ನು ತಿಳಿಸಿದರು. 

ವಿಜ್ಞಾನ ಭವನದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು  ಇಂದು ಸಂಜೆ, ಈ ವರ್ಷದಿಂದ ಆರಂಭಗೊಂಡು, ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಮಾಧ್ಯಮ ಮಾಹಿತಿ ಕೇಂದ್ರ ಹೇಳಿದೆ. 

“ನಾವು ಈ ವಿಷಯವನ್ನು ನಿನ್ನೆಯೇ ಕೇಂದ್ರ ವಾರ್ತಾ ಸಚಿವೆ ಇರಾನಿ ಅವರೊಂದಿಗೆ ಚರ್ಚಿಸಿದ್ದೆವು; ಅದಕ್ಕೆ ಅವರು ನಮಗೆ ಯೋಗ್ಯವಾದ ಉತ್ತರವನ್ನು ಕೊಡಿಸುವ ಭರವಸೆ ನೀಡಿದ್ದರು; ಆದರೆ ಅಂಥದ್ದೇನೂ ನಡೆದಿಲ್ಲ’ ಎಂದು ಪ್ರಶಸ್ತಿ ವಿಜೇತರು ಹೇಳಿದ್ದಾರೆ. 

ಮೊದಲ ಹಂತದ ಕಾರ್ಯಕ್ರಮದಲ್ಲಿ ಕೇಂದ್ರ  ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮ್ರತಿ ಇರಾನಿ ಮತ್ತು ಸಹಾಯಕ ಸಚಿವ ರಾಜ್ಯವರ್ಧನ ಸಿಂಗ್‌ ರಾಠೊಡ್‌ ಅವರು ಸಂಜೆ 4 ಗಂಟೆಗೆ ಪ್ರಶಸ್ತಿ ವಿತರಣೆ ಮಾಡುವರು. ಎರಡನೇ ಹಂತದ ಕಾರ್ಯಕ್ರಮವು ಸಂಜೆ 5.30ಕ್ಕೆ ನಡೆಯಲಿದ್ದು ಅದನ್ನು ರಾಷ್ಟ್ರಪತಿಗಳು ನಡೆಸಿಕೊಡುವರು.

ಸಾಂಪ್ರದಾಯಿಕವಾಗಿ ರಾಷ್ಟ್ರಪತಿಗಳೇ ಎಲ್ಲ ಪ್ರಶಸ್ತಿಗಳನ್ನು ವಿತರಿಸುವ ಕ್ರಮ ಈ ವರೆಗೆ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಅದು ಬದಲಾಗಿದೆ. ಆದರೆ ಈ ಬದಲಾದ ಕ್ರಮಕ್ಕೆ ಪ್ರಶಸ್ತಿ ವಿಜೇತರ ವಿರೋಧ ವ್ಯಕ್ತವಾಗಿದ್ದು ತಾವು ಈ ಕಾರ್ಯಕ್ರಮದಿಂದ ದೂರ ಇರುವುದಾಗಿ ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.