ಲಾಲುಗೆ ಸಿಗದ ಜಾಮೀನು
Team Udayavani, Apr 11, 2019, 6:00 AM IST
ಹೊಸದಿಲ್ಲಿ: ಬಹುಕೋಟಿ ಮೇವು ಹಗರಣದ ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ಬುಧವಾರ ಈ ಆದೇಶ ನೀಡಿದೆ. “ನಾವು ನಿಮ್ಮನ್ನು ಬಿಡುಗಡೆ ಮಾಡುವುದಿಲ್ಲ ಎಂದು ನಿರೀಕ್ಷಿಸು ತ್ತೇವೆ’ ಎಂದು ಹೇಳಿತು. ಆರ್ಜೆಡಿ ಸಂಸ್ಥಾಪಕನ ಪರ ವಾದ ಮಂಡಿಸಿದ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ “ನನ್ನ ಕಕ್ಷೀದಾರರು 24 ತಿಂಗಳುಗಳಿಂದ ಕಾರಾಗೃಹ ದಲ್ಲಿ ದ್ದಾರೆ’ ಎಂದು ಹೇಳಿದರು. ಅದಕ್ಕೆ ಉತ್ತರ ನೀಡಿದ ನ್ಯಾಯಪೀಠ 24 ತಿಂಗಳ ಜೈಲು ಶಿಕ್ಷೆಯನ್ನು 14 ವರ್ಷದ ಶಿಕ್ಷೆಗೆ ಹೋಲಿಕೆ ಮಾಡಬಾರದು ಎಂದು ಹೇಳಿತು.
ಕಪಿಲ್ ಸಿಬಲ್ ವಾದ ಮಂಡಿಸಿ, ಲಾಲು ಯಾದವ್ ವಿರುದ್ಧ ಸಂಚು ಹೂಡಿ ಕೇಸು ದಾಖಲಿಸಲಾಗಿದೆ. ಜತೆಗೆ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಹಗರಣದ ಮೊತ್ತ ವಶಪಡಿಸಲಾಗಿಲ್ಲ ಎಂದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ “ಸದ್ಯ ಜಾಮೀನು ನೀಡಬೇಕೋ ಬೇಡವೊ ಎಂಬ ಬಗ್ಗೆ ಮಾತ್ರ ವಿಚಾರಣೆ ನಡೆಸಲಿದ್ದೇವೆ. ಪ್ರಕರಣದ ಬಗೆಗಿನ ಇತರ ಅಂಶಗಳನ್ನು ಹೈಕೋರ್ಟ್ ನಿರ್ಧರಿಸಲಿದೆ’ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?