ಚುನಾವಣಾ ದಿನಾಂಕ ಟ್ವೀಟ್: BJP ಮಾತ್ರವಲ್ಲ, ಕಾಂಗ್ರೆಸ್ ಕೂಡ !
Team Udayavani, Mar 27, 2018, 4:30 PM IST
ಬೆಂಗಳೂರು : ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರಿಂದು ಬೆಳಗ್ಗೆ ಸುದ್ದಿ ಗೋಷ್ಠಿ ನಡೆಸಿ ಕರ್ನಾಟಕ ವಿಧಾನಸಭೆಯ 2018ರ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸುವುದಕ್ಕೆ ಮುನ್ನವೇ ಅದು ಸಾಮಾಜಿಕ ಮಾಧ್ಯಮಗಳಲ್ಲಿ ಲೀಕ್ ಆದುದು ಹೇಗೆ ಮತ್ತು ಯಾರಿಂದ ಎಂಬುದೀಗ ಬಟಾ ಬಯಲಾಗಿದೆ.
ಮೇ 12ರಂದು ಮತದಾನ ನಡೆಯಲಿದೆ ಎಂಬುದನ್ನು ಟ್ವಿಟರ್ ಮೂಲಕ ಮೊದಲಾಗಿ ಬಹಿರಂಗಪಡಿಸಿದವರು ಭಾರತೀಯ ಜನತಾ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ.
ಅದಾಗಿ ಬೆಳಗ್ಗೆ 11.08ರ ಹೊತ್ತಿಗೆ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮಗಳ ಮೀಡಿಯ ಹೆಡ್ ಇನ್ ಚಾರ್ಜ್ ಶ್ರೀವಾಸ್ತವ ಅವರು ಟ್ವೀಟ್ ಮಾಡಿ ಇದೇ ವಿಷಯವನ್ನು ಬಹಿರಂಗಪಡಿಸಿದರು.
ಆದರೆ ಇವರಿಬ್ಬರೂ ಮತದಾನದ ದಿನಾಂಕವನ್ನು (ಮೇ 12) ಸರಿಯಾಗಿಯೇ ಹೇಳಿದ್ದರು; ಆದರೆ ಮತ ಎಣಿಕೆ ದಿನಾಂಕವನ್ನು (ಮೇ 15) ತಪ್ಪಾಗಿ ಮೇ 18 ಎಂದು ಟ್ವೀಟ್ ಮಾಡಿದ್ದರು.
ಬಿಜೆಪಿ ಸಚಿವ ಮುಖ್ತಾರ್ ಅಬ್ಟಾಸ್ ನಕ್ವಿ ಅವರು “ಅಮಿತ್ ಮಾಳವೀಯ ಟ್ವೀಟ್ ಮಾಡಿರುವುದು ಟಿವಿ ಚ್ಯಾನಲ್ ಮೂಲಗಳ ಆಧಾರದಲ್ಲಿ; ಮುಖ್ಯ ಚುನಾವಣಾ ಆಯುಕ್ತರ ಮಹತ್ವವನ್ನು ತಗ್ಗಿಸುವ ಯಾವುದೇ ಇರಾದೆ ಅವರಿಗೆ ಇರಲಿಲ್ಲ’ ಎಂದು ತಮ್ಮ ಸಹೋದ್ಯೋಗಿಯನ್ನು ಸಮರ್ಥಿಸಿಕೊಂಡಿದ್ದಾರೆ.
ಶ್ರೀವಾಸ್ತವ ಕೂಡ ಬಹುತೇಕ ಇದೇ ಬಗೆಯ ಉತ್ತರವನ್ನು ಕೊಟ್ಟು ನುಣುಚಿಕೊಂಡಿದ್ದಾರೆ. ತಮ್ಮ ಟ್ವೀಟ್ಗೆ ಟಿವಿ ಚ್ಯಾನಲ್ಗಳ ಮೂಲವನ್ನು ದೂರಿದ್ದಾರೆ. ಆದರೆ ಶ್ರೀವಾಸ್ತವ ಅವರು ಟ್ವೀಟ್ ಮಾಡಬಾರದಿತ್ತು ಎಂದು ಕರ್ನಾಟಕ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ಚುನಾವಣಾ ದಿನಾಂಕ ಅಧಿಕೃತ ಪ್ರಕಟನೆ ಸುದ್ದಿಗೋಷ್ಠಿಗೆ ಮುನ್ನವೇ ಸೋರಿ ಹೋಗಿರುವ ಬಗ್ಗೆ ಮಾಧ್ಯಮದವರು ಗುಲ್ಲೆಬ್ಬಿಸಿ ಸಿಇಸಿ ಅವರಿಗೆ ಆಕ್ಷೇಪ ವ್ಯಕ್ತಪಡಿಸಿದಾಗ ಸಿಇಸಿ ನಿರುತ್ತರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
TRAI ವ್ಯಾಪ್ತಿಗೆ ಫೇಸ್ಬುಕ್, ವಾಟ್ಸ್ಆ್ಯಪ್, ಎಕ್ಸ್?
Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!
MUST WATCH
ಹೊಸ ಸೇರ್ಪಡೆ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ
Belagavi: ಮೂರು ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ
Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ