ನೋಟ್‌ ಬ್ಯಾನ್‌: ಮೊದಲೇ ಸಿದ್ಧತೆ, ಅರುಣ್ ಜೇಟ್ಲಿ ಸ್ಪಷ್ಟೋಕ್ತಿ


Team Udayavani, Feb 8, 2017, 8:46 AM IST

Arun-Note-ban-7-2.jpg

ಹೊಸದಿಲ್ಲಿ: ಅಪನಗದೀಕರಣ ದಿಢೀರ್‌ ಆಗಿ ತೆಗೆದುಕೊಂಡ ನಿರ್ಧಾರವಲ್ಲ, ಇದರ ಹಿಂದೆ ಸಾಕಷ್ಟು ಪೂರ್ವಸಿದ್ಧತೆಗಳಾಗಿದ್ದವು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು, ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಪಾಲ್ಗೊಂಡ ಅರುಣ್‌ ಜೇಟ್ಲಿ ಈ ಮಾಹಿತಿ ನೀಡಿದ್ದಾರೆ.  2016ರ ಫೆಬ್ರವರಿಯಲ್ಲೇ ಅಪನಗದೀಕರಣಕ್ಕೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ಆರಂಭಿಸಲಾಗಿತ್ತು. ಆರ್‌ಬಿಐನ ನಿರ್ದೇಶಕ ಮಂಡಳಿ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರ 500ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ಅಪನಗದೀಕರಣ ಮಾಡುವ ನಿರ್ಧಾರ ತೆಗೆದುಕೊಂಡಿತು ಎಂದು ಹೇಳಿದ್ದಾರೆ.

ಅಪನಗದೀಕರಣ ನಿರ್ಧಾರ ಘೋಷಣೆ ಮಾಡುವ ದಿನ, ಅಂದರೆ ನವೆಂಬರ್‌ 8 ರಂದು ನಡೆದ ಸಭೆಯಲ್ಲಿ ಆರ್‌ಬಿಐ ನಿರ್ದೇಶಕರ ಮಂಡಳಿಯಲ್ಲಿರುವ 10 ನಿರ್ದೇಶಕರ ಪೈಕಿ 8 ಮಂದಿ ಭಾಗಿಯಾಗಿದ್ದರು. ಅಂದಿನ ನಿರ್ಧಾರದಂತೆ ಅಪನಗದೀಕರಣ ತೀರ್ಮಾನ ಘೋಷಣೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ. 

ಇದಷ್ಟೇ ಅಲ್ಲ, 2016ರ ಮೇನಲ್ಲೇ 2000 ಮತ್ತು 500 ಮುಖಬೆಲೆಯ ಹೊಸ ನೋಟುಗಳ ಮುದ್ರಣ ಕಾರ್ಯದ ಸಿದ್ಧತೆಗಳು ಆರಂಭವಾಗಿದ್ದವು. ನೋಟಿನ ವಿನ್ಯಾಸ, ಸುರಕ್ಷತಾ ವಿಧಾನಗಳು ಸೇರಿದಂತೆ ಈ ವಿಚಾರಗಳನ್ನು ಆರ್‌ಬಿಐ ನೋಡಿಕೊಂಡಿತ್ತು. ಒಂದು ವೇಳೆ ನೋಟು ಅಪನಗದೀಕರಣ ನಿರ್ಧಾರ ಘೋಷಿಸಿದ ಮೇಲೆ ಯಾವುದೇ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಈ ಮುಂಜಾಗ್ರತೆ ಘೋಷಿಸಲಾಗಿತ್ತು ಎಂದು ಅರುಣ್‌ ಜೇಟ್ಲಿ ವಿವರಿಸಿದ್ದಾರೆ. 

ಆರ್‌ಬಿಐನ ಸಲಹೆ, ಶಿಫಾರಸುಗಳಿಲ್ಲದೇ ಈ ನಿರ್ಧಾರ ತೆಗೆದುಕೊಂಡಿಲ್ಲ. ಆರ್‌ಬಿಐನ ಹಿರಿಯ ಅಧಿಕಾರಿಗಳ ಜತೆ ಆಗಾಗ ಸಭೆ ಸೇರಿ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುತ್ತಿತ್ತು. ವಾರಕ್ಕೆ ಒಮ್ಮೆಯಾದರೂ ಈ ಬಗ್ಗೆ ಸಭೆ ಸೇರಲಾಗುತ್ತಿತ್ತು. ಆದರೆ ಈ ಸಭೆಯಲ್ಲಿ ಏನಾಗುತ್ತಿತ್ತು ಎಂಬುದನ್ನು ಮಾತ್ರ ಭಾರಿ ರಹಸ್ಯವಾಗಿ ಇಡಲಾಗುತ್ತಿತ್ತು ಎಂದು ಜೇಟ್ಲಿ ಹೇಳಿದ್ದಾರೆ. 

ಸರಕಾರವೇ ಈ ನಿರ್ಧಾರ ತೆಗೆದುಕೊಂಡು, ಬಳಿಕ ಆರ್‌ಬಿಐಗೆ ಹೇಳಿತ್ತು ಎಂಬ ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಜೇಟ್ಲಿ ಅವರು, ಆರ್‌ಬಿಐ ಅಧಿಕಾರಿಗಳೇ ಯೋಚಿಸಿ ಈ ತೀರ್ಮಾನ ತೆಗೆದುಕೊಂಡು ಸರಕಾರಕ್ಕೆ ಶಿಫಾರಸು ಮಾಡಿದ್ದರು ಎಂದು ತಿಳಿಸಿದ್ದಾರೆ. ಆರ್‌ಬಿಐನಲ್ಲಿ ಸದ್ಯ 10 ನಿರ್ದೇಶಕರಿದ್ದಾರೆ. ಇವರಲ್ಲಿ 8 ಮಂದಿ ಮಾತ್ರ ನ.8ರ ದಿನ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಕೆಲ ಸ್ಥಾನಗಳು ಇನ್ನೂ ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಬೇಕಿದೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.