ಏನೇನೂ ತನಿಖೆ ನಡೆಸಿಲ್ಲ,ಎಲ್ಲರನ್ನೂ ಮೂರ್ಖರನ್ನಾಗಿಸುತ್ತಾ ಬಂದಿದ್ದೀರಿ
Team Udayavani, Nov 27, 2018, 6:35 AM IST
ನವದೆಹಲಿ: ಸಾಹಿತಿ, ವಿಮರ್ಶಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್
ಸೋಮವಾರ ಕರ್ನಾಟಕ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
“ತನಿಖೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಏನೇನೂ ಮಾಡುತ್ತಿಲ್ಲ.ಎಲ್ಲರನ್ನೂ ಮೂರ್ಖರನ್ನಾಗಿಸುತ್ತಾ ಸಾಗುತ್ತಿದೆ’ ಎಂದು ಹೇಳಿದೆ.
ಅಲ್ಲದೆ, ಕರ್ನಾಟಕ ಸರ್ಕಾರ ಸಲ್ಲಿಸುವ ತನಿಖೆಯ ಸ್ಥಿತಿಗತಿ ವರದಿಯನ್ನು ಪರಿಶೀಲಿಸಿದ ಬಳಿಕ, ಅಗತ್ಯ ಕಂಡುಬಂದರೆ ಪ್ರಕರಣವನ್ನು ಬಾಂಬೆ ಹೈಕೋರ್ಟ್ಗೆ ವರ್ಗಾಯಿಸಿ, ತನಿಖೆಗೆ ಮೇಲ್ವಿಚಾರಣೆ ನೋಡಿಕೊಳ್ಳುವಂತೆ ಸೂಚಿಸುತ್ತೇವೆ ಎಂಬ ಸುಳಿವನ್ನೂ ಸುಪ್ರೀಂಕೋರ್ಟ್ ನೀಡಿದೆ.
ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸ ಬೇಕೆಂದು ಕೋರಿ ಕಲಬುರ್ಗಿ ಅವರ ಪತ್ನಿ ಉಮಾದೇವಿ ಕಲಬುರ್ಗಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ನವಿನ್ ಸಿನ್ಹಾ ಅವರನ್ನೊಳಗೊಂಡ ನ್ಯಾಯಪೀಠ, ಈವರೆಗೆ ಪ್ರಕರಣಕ್ಕೆ ಸಂಬಂಧಿಸಿ ನಡೆದಿರುವ ತನಿಖೆಯ ವಿವರಗಳನ್ನು ಒಳಗೊಂಡ ಸ್ಥಿತಿಗತಿ ವರದಿಯನ್ನು 2 ವಾರಗಳೊಳಗೆ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
“ಪ್ರಕರಣಕ್ಕೆ ಸಂಬಂಧಿಸಿ ಏನು ತನಿಖೆ ನಡೆಸಿದ್ದೀರಿ? ಏನೇನೂ ಇಲ್ಲ. ನೀವು ಎಲ್ಲರನ್ನೂ ಮೂರ್ಖರನ್ನಾಗಿಸುತ್ತಿದ್ದೀರಿ ಅಷ್ಟೆ. ತನಿಖೆ ಪೂರ್ಣಗೊಳಿಸಲು ಇನ್ನೆಷ್ಟು ದಿನ ತೆಗೆದುಕೊಳ್ಳುತ್ತೀರಾ? ಈ ಬಗ್ಗೆ ಉತ್ತರ ಕೊಡಿ, ಇಲ್ಲವೇ ನಾವೇ ಆದೇಶ ಹೊರಡಿಸುತ್ತೇವೆ’ ಎಂದಿತು ನ್ಯಾಯಪೀಠ. ಕರ್ನಾಟಕ ಸರ್ಕಾರದ ಪರ ವಕೀಲ ದೇವದತ್ತ ಕಾಮತ್ ವಾದ ಮಂಡಿಸಿದರು. 2015ರಲ್ಲಿ ಧಾರವಾಡದ ನಿವಾಸದಲ್ಲೇ ಕಲಬುರ್ಗಿ ಅವರ ಹತ್ಯೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ
ರಾಹುಲ್ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಹೇಳಿಕೆ
ಭಾರತದಲ್ಲಿ ತಯಾರಾಗುವ ವಿದೇಶಿ ಚಿತ್ರಗಳಿಗೆ ಪ್ರೋತ್ಸಾಹ
ಬಾಡಿಗಾರ್ಡ್ ಇಲ್ಲದೆ ನ್ಯಾನೋ ಕಾರಿನಲ್ಲಿ ತಾಜ್ ಹೋಟೆಲ್ಗೆ ಬಂದ ರತನ್ ಟಾಟಾ
ರಾಜೀವ್ಗಾಂಧಿ ಹಂತಕ ಪೆರಾರಿವೇಲನ್ ಬಿಡುಗಡೆ : ಕಾಂಗ್ರೆಸ್ ತೀವ್ರ ಆಕ್ಷೇಪ
MUST WATCH
ಹೊಸ ಸೇರ್ಪಡೆ
ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!
ಬಿತ್ತನೆ ಬೀಜ, ಗೊಬ್ಬರ ವಿತರಣೆ ಶೀಘ್ರ ಆರಂಭ; ಕರಾವಳಿಯಲ್ಲಿ ಕೃಷಿ ಚಟುವಟಿಕೆಗೆ ಚಾಲನೆ
ಗ್ರಾಮ ಪಂಚಾಯತ್ ತ್ಯಾಜ್ಯ ಸಂಗ್ರಹ ವಾಹನಗಳ ಜಿಪಿಎಸ್ ಟ್ರ್ಯಾಕಿಂಗ್ !
ದ.ಕ., ಉಡುಪಿಯಲ್ಲಿ 207 ಡೆಂಗ್ಯೂ ಪ್ರಕರಣ; ಕೊಲ್ಲೂರು,ನೆರಿಯ ಪರಿಸರದಲ್ಲಿ ಅತ್ಯಧಿಕ
ಸಿಇಟಿ ಸಿದ್ಧತೆಗೆ ಆರಂಭವಾಗದ “ವಿಕಸನ’