ನೋಟು ಅಮಾನ್ಯದ ಬಗ್ಗೆ ಎಚ್ಚರಿಕೆ ನೀಡಿದ್ದ ಮಂಡಳಿ
Team Udayavani, Mar 12, 2019, 12:30 AM IST
ಹೊಸದಿಲ್ಲಿ: ನೋಟು ಅಮಾನ್ಯದಿಂದ ದೇಶದ ಆರ್ಥಿಕತೆ ಮೇಲೆ ಅಲ್ಪಾವಧಿಯಲ್ಲಿ ಋಣಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ಆರ್ಬಿಐ ಮಂಡಳಿ ಎಚ್ಚರಿಕೆ ನೀಡಿತ್ತು. ಅಷ್ಟೇ ಅಲ್ಲ, ಕಪ್ಪು ಹಣ ಸಮಸ್ಯೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿಯೂ ಇದು ಅಷ್ಟೇನೂ ಪರಿಣಾಮ ಬೀರದು ಎಂದೂ ಅಭಿಪ್ರಾಯ ವ್ಯಕ್ತಪಡಿಸಿತ್ತು ಎಂಬುದು ತಿಳಿದುಬಂದಿದೆ. ಆರ್ಟಿಐ ಅಡಿಯಲ್ಲಿ ವೆಂಕಟೇಶ್ ನಾಯಕ್ ಎಂಬವರು ಸಲ್ಲಿಸಿದ ಅರ್ಜಿಗೆ ಉತ್ತರಿಸಿದ ಆರ್ಬಿಐ, ನೋಟು ಅಮಾನ್ಯ ನಿರ್ಧಾರ ಪ್ರಕಟಿಸುವುದಕ್ಕೂ ಎರಡೂವರೆ ಗಂಟೆ ಮೊದಲು ಸಭೆ ನಡೆಸಿದಾಗ ಈ ಮಾಹಿತಿ ನೀಡಲಾಗಿತ್ತು ಎಂದಿದೆ. ಇದು ಮಹತ್ತರವಾದ ನಿರ್ಧಾರ. ಆದರೆ ಜಿಡಿಪಿ ಮೇಲೆ ಅಲ್ಪಾವಧಿ ಋಣಾತ್ಮಕ ಪರಿಣಾಮ ಬೀರುತ್ತದೆ. ಬಹುತೇಕ ಕಪ್ಪುಹಣ ನಗದು ರೂಪದಲ್ಲಿಲ್ಲ. ಇದು ರಿಯಲ್ ಎಸ್ಟೇಟ್ ಮತ್ತು ಚಿನ್ನದಂತಹ ವಲಯದಲ್ಲಿದೆ. ಇದರಿಂದ ಈ ಸ್ವತ್ತುಗಳ ಮೇಲೆ ಮಹತ್ವದ ಪರಿಣಾಮ ಉಂಟಾಗುವುದಿಲ್ಲ ಎಂದು ಮಂಡಳಿ ಅಭಿಪ್ರಾಯ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ