ಉಗ್ರನ ಮೃತದೇಹ ಕೊಂಡು ಹೋಗಿ: ಪಾಕ್ಗೆ ಭಾರತ
Team Udayavani, Aug 3, 2017, 10:00 AM IST
ಶ್ರೀನಗರ: ಮಂಗಳವಾರ ಕಾಶ್ಮೀರ ಪುಲ್ವಾಮಾದಲ್ಲಿ ಮಹತ್ವದ ಎನ್ಕೌಂಟರ್ಗೆ ಬಲಿಯಾದ ಲಷ್ಕರ್ ಉಗ್ರ ಅಬು ದುಜಾನಾ ಮೃತದೇಹವನ್ನು ಕೊಂಡುಹೋಗುವಂತೆ ಪಾಕಿಸ್ಥಾನ ಹೈಕಮಿಷನ್ಗೆ ಕೇಂದ್ರ ಗೃಹ ಇಲಾಖೆ ತಿಳಿಸಲಿದೆ. ಹೀಗೆಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ದುಜಾನಾ ಪಾಕ್ ಪ್ರಜೆಯಾದ ಕಾರಣ ಅವನ ಶವವನ್ನು ಅಲ್ಲಿಗೆ ಕಳುಹಿಸಲು ನಿರ್ಧರಿಸಲಾಗಿದೆ. ಆದರೆ, ಕಣಿವೆ ರಾಜ್ಯದಲ್ಲಿ ಈ ಹಿಂದೆಯೂ ಅನೇಕ ಪಾಕ್ ಮೂಲದ ಉಗ್ರರು ಹತ್ಯೆಗೀಡಾಗಿದ್ದರೂ ಮೃತದೇಹ ಕೊಂಡುಹೋಗುವಂತೆ ಪಾಕಿಸ್ಥಾನಕ್ಕೆ ಕೋರುತ್ತಿರುವುದು ಇದೇ ಮೊದಲು ಎನ್ನಲಾಗಿದೆ.
ಇದೇ ವೇಳೆ, ಮಂಗಳವಾರದ ಎನ್ಕೌಂಟರ್ ವೇಳೆ ಪ್ರತಿಭಟಿಸಲು ಮುಂದಾಗಿ ಗಾಯಗೊಂಡಿದ್ದ ಪ್ರತ್ಯೇಕತಾವಾದಿ ಗುಂಪಿನ ಸದಸ್ಯ ಬುಧವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಬರ್ಪೂರ ನಿವಾಸಿ ಅಖೀಲ್ ಅಹಮ್ಮದ್ ಭಟ್ ಸಾವನ್ನಪ್ಪಿದ ವ್ಯಕ್ತಿ. ದುಜಾನಾ ಹತ್ಯೆ ಬಳಿಕ ಜಂಟಿ ಕಾರ್ಯಾಚರಣೆ ನಡೆಸಿದ ಗಡಿ ಭದ್ರತಾ ಪಡೆ ಹಾಗೂ ಪೊಲೀಸರ ವಿರುದ್ಧವೇ ಗುಂಪು ಪ್ರತಿಭಟಿಸಿ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಹಾಗೂ ಗುಂಡಿನ ದಾಳಿ ನಡೆಸಿತ್ತು. ಘಟನೆಯಲ್ಲಿ ಗಾಯಗೊಂಡು ಸಾವನ್ನಪ್ಪಿರುವವರಲ್ಲಿ ಅಖೀಲ್ ಎರಡನೆಯವರಾಗಿದ್ದಾರೆ. ಫಿರ್ದೋಸ್ ಎಂಬವರು ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು. ಎನ್ಕೌಂಟರ್ ಬಳಿಕ ಪುಲ್ವಾಮಾ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕಾಶ್ಮೀರ ವಿಚಾರ ಸೇರಿದಂತೆ ಎಲ್ಲದರಲ್ಲೂ ಚೀನ ಸದಾ ಬೆಂಬಲ ನೀಡುತ್ತಿರುವುದಕ್ಕೆ ನಾವು ಚಿರಋಣಿಗಳಾಗಿದ್ದೇವೆ.
– ಜ. ಖಮರ್ ಜಾವೇದ್ ಬಾಜ್ವಾ, ಪಾಕ್ ಸೇನಾ ಮುಖ್ಯಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ