ಕೆನಾಡದ ಗ್ರೇಟರ್ ಟೊರೊಂಟೊದ ರಸ್ತೆಗಳಲ್ಲಿ ಮೋದಿ ಭಾವಚಿತ್ರವಿರುವ ಫ್ಲೆಕ್ಸ್.! ಯಾಕೆ..?
Team Udayavani, Mar 11, 2021, 3:40 PM IST
ಟೊರೊಂಟೊ: ದೇಶದಾದ್ಯಂತ ಕೋವಿಡ್ ಲಸಿಕೆ ಆಂದೋಲನ ನಡೆಯುತ್ತಿದೆ ಮತ್ತು ವಿದೇಶಗಳಿಗೂ ಲಸಿಕೆಯನ್ನು ಪೂರೈಸುತ್ತಿದೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಭಾರತ ಕೈಗೊಂಡ ಕ್ರಮಗಳಿಗೆ ಹಾಗೂ ಲಸಿಕೆ ಅಭಿಯಾನಕ್ಕೆ ದೇಶ ವಿದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ದೇಶದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕೆನಡಾದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಗ್ರೇಟರ್ ಟೊರೊಂಟೊದ ರಸ್ತೆಗಳ ಬದಿಯಲ್ಲಿ ನರೇಂದ್ರ ಮೋದಿ ಅವರ ದೊಡ್ಡ ದೊಡ್ಡ ಫ್ಲೆಕ್ಸ್ ಗಳನ್ನು ಹಾಕಿ ಕೃತಜ್ಞತೆಯನ್ನು ಸಲ್ಲಿಸಲಾಗಿದೆ.
Billboards come up in Greater Toronto area thanking PM Narendra Modi for providing COVID-19 vaccines to Canada pic.twitter.com/0AaQysm6O1
— ANI (@ANI) March 11, 2021
ಓದಿ : ಕೋವಿಡ್ 19 ಸೋಂಕು ಹೆಚ್ಚಳ; ಮಾರ್ಚ್ 15ರಿಂದ 21ರವರೆಗೆ ನಾಗ್ಪುರದಲ್ಲಿ ಲಾಕ್ ಡೌನ್ ಜಾರಿ
ಪ್ರಧಾನಿ ಮೋದಿಯವರ ಭಾವಚಿತ್ರ ಹೊಂದಿರುವ ಫ್ಲೆಕ್ಸ್ ಗಳನ್ನು ಹಾಕುವ ಮೂಲಕ ಕೋವಿಡ್ ಲಸಿಕೆಯನ್ನು ಪೂರೈಸಿದ ಕಾರಣಕ್ಕೆ ಅಲ್ಲಿನ ಜನರು ಪ್ರಧಾನಿ ಮೋದಿಯವರಿಗೆ ಧನ್ಯವಾದವನ್ನು ಸಮರ್ಪಿಸುತ್ತಿದ್ದಾರೆ.
ಭಾರತ ಇತ್ತೀಚೆಗೆ ಕೆನಡಾ, ನೇಪಾಳ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಒದಗಿಸಿತ್ತು.
ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಲಸಿಕೆಯ ಐದು ಲಕ್ಷ ಡೋಸ್ ಗಳನ್ನು ಕೆನಡಾಕ್ಕೆ ತಲುಪಿದೆ ಎಂದು ಇತ್ತೀಚೆಗೆ ಕೆನಡಾದ ಸಚಿವ ಅನಿತಾ ಆನಂದ್ ಹೇಳಿದ್ದರು.
ಕೋವಿಡ್ ವಿರುದ್ಧ ಹೋರಾಡುವುದಕ್ಕೆ ಲಸಿಕೆಯನ್ನು ನೀಡುವಂತೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಭಾರತ, ಕೆನಡಾ ಕೇಳಿದ ಕೋವಿಡ್ ಲಸಿಕೆಯ ಪ್ರಮಾಣವನ್ನು ಪೂರೈಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಭರವಸೆ ನೀಡಿತ್ತು.
ಓದಿ : ಶಿವರಾತ್ರಿಗೆ ಶಿವಣ್ಣನ ಭರ್ಜರಿ ಗಿಫ್ಟ್…ಹ್ಯಾಟ್ರಿಕ್ ಹೀರೋನ 125ನೇ ಸಿನಿಮಾ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ