Facebook Love: ಪ್ರಿಯಕರನನ್ನು ಭೇಟಿಯಾಗಲು ಪಾಕಿಸ್ತಾನ ತಲುಪಿದ ಭಾರತೀಯ ವಿವಾಹಿತ ಮಹಿಳೆ
Team Udayavani, Jul 24, 2023, 10:07 AM IST
ಜೈಪುರ: ಪಬ್ ಜೀ ಗೇಮ್ ಆಡುತ್ತಾ ಪ್ರಿಯಕರನಿಗಾಗಿ ಅಕ್ರಮವಾಗಿ ಭಾರತಕ್ಕೆ ಬಂದ ನಾಲ್ಕು ಮಕ್ಕಳು ತಾಯಿ, ಪಾಕ್ ಮಹಿಳೆ ಸೀಮಾ ಹೈದರ್ ಅವರ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಭಾರತದ ಮಹಿಳೆಯೊಬ್ಬರು ಫೇಸ್ ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕ್ ಗೆ ತಲುಪಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆಯಾಗಿರುವ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾಗಿರುವ ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್ ಗೆ ತಲುಪಿದ್ದಾರೆ.
ಘಟನೆ ಹಿನ್ನೆಲೆ: ಘಟನೆ ಬಗ್ಗೆ ಮಾತನಾಡುವ ಅಂಜು ಪತಿ ಅರವಿಂದ್ “ಕಳೆದ ಕೆಲ ದಿನಗಳ ಕಾಲ ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಆದರೆ ಭಾನುವಾರ(ಜು.23 ರಂದು) ಮಾಧ್ಯಮಗಳ ಮೂಲಕ ನನಗೆ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದಾಗಿ ಗೊತ್ತಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಅಂಜು ವಾಟ್ಸಾಪ್ ಮೂಲಕ ಕರೆ ಮಾಡಿ ನಾನು ಲಾಹೋರ್ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ಹೇಳಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್ಪೋರ್ಟ್ ಮಾಡಿಸಿಕೊಂಡಿದ್ದಾಳೆ.ಅವಳು ಶೀಘ್ರದಲ್ಲಿ ಬರುತ್ತಾಳೆ ಎನ್ನುವ ನಂಬಿಕೆ ನನಗಿದೆ ಎಂದು ಪತಿ ಅರವಿಂದ್ ಹೇಳುತ್ತಾರೆ.
ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಅರವಿಂದ್ ಅವರೊಂದಿಗೆ ಮದುವೆಯಾಗಿದ್ದಾರೆ. ಅರವಿಂದ್ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಅಂಜು ಅವರ ಸಹೋದರನೊಂದಿಗೆ ಭಿವಾಡಿಯಲ್ಲಿ ಬಾಡಿಗೆ ಫ್ಲಾಟ್ನಲ್ಲಿ ವಾಸವಾಗಿದ್ದಾರೆ.
ಕಳೆದ ಕೆಲ ಸಮಯದಿಂದ ಅಂಜು ಫೇಸ್ ಬುಕ್ ನಲ್ಲಿ ಪರಿಚಯವಾದ ಪಾಕ್ ಮೂಲದ 29 ವರ್ಷದ ನಸ್ರುಲ್ಲಾನೊಂದಿಗೆ ಆತ್ಮೀಯವಾಗಿದ್ದಳು. ಅವಳು ಹಾಗೂ ನಸ್ರುಲ್ಲಾ ಪರಸ್ಪರ ಪ್ರೀತಿಸುತ್ತಿದ್ದರು. ಪತಿಯ ಬಳಿ ಜೈಪುರಕ್ಕೆ ಹೋಗಿ ಬರುವುದಾಗಿ ಹೇಳಿ ಪ್ರಿಯಕರನನ್ನು ಭೇಟಿ ಆಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎಂದು ವರದಿ ತಿಳಿಸಿದೆ.
ಅಂಜು ಅವರು ಪಾಕ್ ತಲುಪಿದ ಬಳಿಕ ಅವರನ್ನು ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿರಿಸಿದ್ದರು. ಆ ಬಳಿಕ ಅವರು ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್