ಈಗ ಪ್ರಧಾನಮಂತ್ರಿ ಹುದ್ದೆ ವಿಚಾರವೇ ಅಲ್ಲ: ಮಲ್ಲಿಕಾರ್ಜುನ ಖರ್ಗೆ
Team Udayavani, Mar 2, 2023, 7:40 AM IST
ಚೆನ್ನೈ: ಮುಂದಿನ ಪ್ರಧಾನಿ ಯಾವ ಪಕ್ಷದಿಂದ ಆಗಬೇಕು ಎಂಬುದು ಒಂದು ವಿಚಾರವೇ ಅಲ್ಲ. ಮೊದಲಿಗೆ ನಾವೆಲ್ಲರೂ ಸೇರಿ ಒಟ್ಟಾಗಿ ನಿಂತು ಬಿಜೆಪಿ ಸೋಲಿಸೋಣ, ಬಳಿಕ ಈ ಬಗ್ಗೆ ಮಾತನಾಡೋಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ಚೆನ್ನೈಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ 70ನೇ ಹುಟ್ಟುಹಬ್ಬ ನಿಮಿತ್ತ ಬಹುತೇಕ ವಿಪಕ್ಷ ನಾಯಕರೆಲ್ಲರೂ ಒಟ್ಟಾಗಿ ಭಾಗಿಯಾಗಿದ್ದರು. ಅಲ್ಲದೆ, ಈ ಸಮಾರಂಭವನ್ನೂ ಬಿಜೆಪಿ ವಿರುದ್ಧ ಕೂಟವಾಗಿ ಸ್ಪರ್ಧಿಸಬೇಕು ಎಂಬ ಬಗ್ಗೆ ಸ್ವತಃ ಖರ್ಗೆ ಅವರೇ ಒತ್ತಿ ಹೇಳಿದರು.
ಈಗಾಗಲೇ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಮೂಲಕ ಹೊಸ ಹುಮ್ಮಸ್ಸಿನಲ್ಲಿದೆ. ಜತೆಗೆ, 2024ರಲ್ಲಿ ಒಟ್ಟಾಗಿ ಹೋದರೆ ಬಿಜೆಪಿ ವಿರುದ್ಧ ಯಶಸ್ಸು ಸಾಧಿಸಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ನದ್ದು. ಹೀಗಾಗಿಯೇ ಖರ್ಗೆ ಅವರು, ಎಲ್ಲಾ ಸಮಾನ ಮನಸ್ಕ ಪಕ್ಷಗಳು ಒಂದಾಗಬೇಕು. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕತ್ವ ಸ್ಥಾನ ವಹಿಸಿಕೊಳ್ಳಬೇಕು, ಕಾಂಗ್ರೆಸ್ನವರೇ ಪ್ರಧಾನಿಯಾಗಬೇಕು ಎಂದು ನಾನು ಹೇಳಲ್ಲ. ಆದರೆ, ಬಿಜೆಪಿಯ ಒಡೆದು ಆಳುವ ನೀತಿಯನ್ನು ಕೊನೆಗಾಣಿಸಿಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಎಸ್ಪಿಯ ಅಖೀಲೇಶ್ ಯಾದವ್, ಎಸ್ಸಿಯ ಫಾರೂಕ್ ಅಬ್ದುಲ್ಲಾ, ಆರ್ಜೆಡಿಯ ತೇಜಸ್ವಿ ಯಾದವ್ ಸಹಿತ ವಿವಿಧ ನಾಯಕರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ