ಬಿಜೆಪಿಗೆ ಜೈ ಎಂದ ಎನ್ನಾರೈ ಪಟೇಲರು!
Team Udayavani, Nov 26, 2017, 6:50 AM IST
ಅಲಹಾಬಾದ್: ಗುಜರಾತ್ನ ಮತದಾರರಲ್ಲಿ ಶೇ.14ರಷ್ಟು ಪಾಲು ಹೊಂದಿರುವ ಹಾಗೂ ಕಳೆದೆರಡು ದಶಕಗಳಿಂದ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಪಟೇಲ್ ಸಮುದಾಯವನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎತ್ತಿಕಟ್ಟುತ್ತಿರುವ ಆ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ಗೆ ಹಿನ್ನಡೆಯಾಗುವ ಸಾಧ್ಯತೆಗಳು ದಟ್ಟವಾಗಿವೆ.
ಮತದಾನಕ್ಕೆ ಇನ್ನೊಂದು ವಾರ ಇರುವಾಗಲೇ ಅಮೆರಿಕ, ಆಸ್ಟ್ರೇಲಿಯಾಗಳಲ್ಲಿರುವ ಸುಮಾರು 150ಕ್ಕೂ ಹೆಚ್ಚು ಅನಿವಾಸಿ ಪಟೇಲ್ ಉದ್ಯಮಿಗಳು ಗುಜರಾತ್ಗೆ ಆಗಮಿಸಿದ್ದಾರೆ. ಇವರೆಲ್ಲರೂ ಬಿಜೆಪಿ ಪರವಾಗಿ ಮತ ಚಲಾಯಿಸುವಂತೆ ತಮ್ಮ ಸಮುದಾಯವನ್ನು ಪ್ರೇರೇಪಿಸುವ ಅಭಿಯಾನ ಕೈಗೊಂಡಿದ್ದಾರೆ. ಸಾರ್ವತ್ರಿಕ ರ್ಯಾಲಿ, ಸಮುದಾಯ ಸಂಪರ್ಕ ಸಭೆಗಳ ಜತೆಗೆ ಫೇಸ್ಬುಕ್, ಟ್ವಿಟರ್, ಇನ್ಸ್ಟಾ ಗ್ರಾಂ ಮೂಲಕ ಅಭಿಯಾನ ಜೋರಾಗಿ ಸಾಗಿದೆ. ಈ ಎನ್ಆರ್ಐಗಳ ಪ್ರಯತ್ನ, ಹಾರ್ದಿಕ್ ಪಟೇಲ್ ಪ್ರಯತ್ನಕ್ಕೆ ತೀವ್ರ ಹಿನ್ನಡೆ ತರಲಿದೆ ಎಂದು ಹೇಳಲಾಗುತ್ತಿದೆ.
ಅತ್ತೆ ಬದಲಿಗೆ ಸೊಸೆಗೆ ಟಿಕೆಟ್!
ಕಲೋಲ್ ಕ್ಷೇತ್ರದಲ್ಲಿ ತಮ್ಮಿಚ್ಛೆಯಂತೆ ಪತ್ನಿಗೆ ಟಿಕೆಟ್ ನೀಡದೆ ತಮ್ಮ ಸೊಸೆಗೆ ಟಿಕೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ಕಲೋಲ್ ಕ್ಷೇತ್ರವಿರುವ ಪಂಚಮಹಲ್ ಕ್ಷೇತ್ರದ ಬಿಜೆಪಿ ಸಂಸದ ಪ್ರಭಾತ್ ಚೌಹಾನ್ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಹಾನ್, ತತ್ಕ್ಷಣವೇ ಕಲೋಲ್ ಕ್ಷೇತ್ರಕ್ಕೆ ತಮ್ಮ ಪತ್ನಿಯನ್ನು ಅಭ್ಯರ್ಥಿಯನ್ನಾಗಿಸಬೇಕು. ಇಲ್ಲವಾದರೆ, ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಬಗ್ಗೆ ಯಾವುದೇ ಖಾತ್ರಿ ನೀಡಲಾಗದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ