ಜೆಇಇ, ನೀಟ್‌ ವರ್ಷಕ್ಕೆರಡು ಬಾರಿ


Team Udayavani, Jul 8, 2018, 6:00 AM IST

v-25.jpg

ಹೊಸದಿಲ್ಲಿ: ಜೆಇಇ ಹಾಗೂ ನೀಟ್‌ ಬರೆಯುವ ಅವಕಾಶ ತಪ್ಪಿಸಿಕೊಂಡರೆ ಅಥವಾ ಫೇಲ್‌ ಆದರೆ ಇನ್ನು ಒಂದು ವರ್ಷದ ವರೆಗೆ ಕಾಯಬೇಕಿಲ್ಲ. ಏಕೆಂದರೆ ಮುಂದಿನ ವರ್ಷದಿಂದಲೇ ವರ್ಷಕ್ಕೆ ಎರಡು ಬಾರಿ ಈ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲ, ನೀಟ್‌, ಜೆಇಇ, ನೆಟ್‌, ಜಿಪಿಎಟಿ ಹಾಗೂ ಸಿಎಂಎಟಿಗಳಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಸಿಬಿಎಸ್‌ಇ ಹಾಗೂ ಯುಜಿಸಿ ನಡೆಸುತ್ತಿದ್ದ ಈ ಪರೀಕ್ಷೆಗಳ ಉಸ್ತುವಾರಿ ಹೊಣೆಯನ್ನು ಈಗ ಹೊಸ ಸಂಸ್ಥೆ ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ (ಎನ್‌ಟಿಎ)ಗೆ ವಹಿಸಲಾಗಿದೆ.

ಮಾನವ ಸಂಪದಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಶನಿವಾರ ಈ ಘೋಷಣೆ ಮಾಡಿದ್ದಾರೆ. ಎನ್‌ಟಿಎ ನಡೆಸಲಿರುವ ಮೊದಲ ಪರೀಕ್ಷೆ ಡಿಸೆಂಬರ್‌ನಲ್ಲಿ ನಡೆಯುವ ಯುಜಿಸಿ ನೆಟ್‌ ಆಗಿರಲಿದೆ. ಎಲ್ಲ ಟೆಸ್ಟ್‌ಗಳನ್ನೂ ಕಂಪ್ಯೂ ಟರ್‌ ಮೂಲಕವೇ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸೆಂಟರ್‌, ಪರೀಕ್ಷೆ ದಿನಾಂಕ ಆಯ್ಕೆ ಅವಕಾಶ ಕಲ್ಪಿಸಲಾಗುತ್ತದೆ.

4-5 ದಿನಗಳವರೆಗೆ ಪರೀಕ್ಷೆ
ಜೆಇಇ ಅನ್ನು ಪ್ರತಿ ವರ್ಷ ಜನವರಿ ಮತ್ತು ಎಪ್ರಿಲ್‌ನಲ್ಲಿ ಹಾಗೂ ನೀಟ್‌ ಅನ್ನು ಫೆಬ್ರವರಿ ಮತ್ತು ಮೇಯಲ್ಲಿ ನಡೆಸಲಾಗುತ್ತದೆ. 4-5 ದಿನಗಳ ವರೆಗೆ ಪರೀಕ್ಷೆ ನಡೆಸಲಾಗುತ್ತದೆ. ಪ್ರತೀ ದಿನದ ಪ್ರಶ್ನೆಪತ್ರಿಕೆಯೂ ವಿಭಿನ್ನವಾಗಿ ರುತ್ತದೆ ಮತ್ತು ಪ್ರತೀ ಅಭ್ಯರ್ಥಿಗೆ ಯಾದೃಚ್ಛಿಕ ವಾಗಿ ನೀಡಲಾಗಿರುತ್ತದೆ. ಆದರೆ ಕಾಠಿನ್ಯದ ಮಟ್ಟ ಒಂದೇ ಇರುತ್ತದೆ. 

ಪಠ್ಯಕ್ರಮ ಬದಲಾವಣೆ ಇಲ್ಲ
ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಷ್ಟೇ ಅಲ್ಲ, ಪರೀಕ್ಷೆ ಶುಲ್ಕದಲ್ಲೂ ಬದಲಾವಣೆ ಇಲ್ಲ. ಪರೀಕ್ಷೆ ನಡೆಸುವಲ್ಲಿ ಸಂಶೋಧಕರು, ಸಂಖ್ಯಾಶಾಸ್ತ್ರಜ್ಞರು, ಮನಃಶಾಸ್ತ್ರಜ್ಞರು ಮತ್ತು ಶಿಕ್ಷಣ ತಜ್ಞರನ್ನೂ ಸೇರಿಸಿಕೊಳ್ಳಲಾಗುತ್ತದೆ. ಅತ್ಯಂತ ಉನ್ನತ ಗುಣಮಟ್ಟದ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್‌ ಬಳಸಲಾಗುತ್ತದೆ. ಸೋರಿಕೆ ಇಲ್ಲದಂತೆ ಪರೀಕ್ಷೆ ನಡೆಸಲು ಎನ್‌ಕ್ರಿಪ್ಷನ್‌ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ.

ಪರೀಕ್ಷೆಗೆ ತಯಾರಿ ಉಚಿತ
ಎಲ್ಲ ಪರೀಕ್ಷೆಗಳೂ ಕಂಪ್ಯೂಟರ್‌ ಆಧರಿತವಾಗಿವೆ. ಮನೆ ಅಥವಾ ಅಧಿಕೃತ ಕಂಪ್ಯೂಟರ್‌ ಸೆಂಟರ್‌ಗಳಲ್ಲಿ ಉಚಿತವಾಗಿ ವಿದ್ಯಾರ್ಥಿಗಳು ಪ್ರಾಕ್ಟೀಸ್‌ ಮಾಡಬಹುದು. ಉಚಿತವಾಗಿ ತಯಾರಿ ನಡೆಸಬಹುದಾದ ಕೇಂದ್ರಗಳ ವಿವರಗಳನ್ನು ಶೀಘ್ರದಲ್ಲೇ ಬಹಿರಂಗ ಗೊಳಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೂ ಪ್ರಾಕ್ಟೀಸ್‌ ನಡೆಸಲು ಅವಕಾಶ ಸಿಗುವಂತೆ ಗ್ರಾಮೀಣ ಪ್ರದೇಶಗಳಲ್ಲೂ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಆಗಸ್ಟ್‌ ಮೂರನೇ ವಾರದಿಂದ ಪ್ರಾಕ್ಟೀಸ್‌ ನಡೆಸಬಹುದಾಗಿದೆ.

ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ಮಾಡಲಾಗುತ್ತಿದೆ. ಡಿಸೆಂಬರ್‌ನಿಂದ ಎನ್‌ಟಿಎ ದೇಶದಲ್ಲಿ ಪರೀಕ್ಷೆಗಳನ್ನು ನಡೆಸಲು ಆರಂಭಿಸಲಿದೆ. ಶೀಘ್ರದಲ್ಲೇ ಸಮಗ್ರ ವಿವರಗಳನ್ನು ಎನ್‌ಟಿಎ ಬಿಡುಗಡೆ ಮಾಡಲಿದೆ.
– ಪ್ರಕಾಶ್‌ ಜಾಬ್ಡೇಕರ್‌, ಮಾನವ ಸಂಪದಭಿವೃದ್ಧಿ ಸಚಿವ

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.