ಜೆಇಇ, ನೀಟ್‌ ವರ್ಷಕ್ಕೆರಡು ಬಾರಿ


Team Udayavani, Jul 8, 2018, 6:00 AM IST

v-25.jpg

ಹೊಸದಿಲ್ಲಿ: ಜೆಇಇ ಹಾಗೂ ನೀಟ್‌ ಬರೆಯುವ ಅವಕಾಶ ತಪ್ಪಿಸಿಕೊಂಡರೆ ಅಥವಾ ಫೇಲ್‌ ಆದರೆ ಇನ್ನು ಒಂದು ವರ್ಷದ ವರೆಗೆ ಕಾಯಬೇಕಿಲ್ಲ. ಏಕೆಂದರೆ ಮುಂದಿನ ವರ್ಷದಿಂದಲೇ ವರ್ಷಕ್ಕೆ ಎರಡು ಬಾರಿ ಈ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲ, ನೀಟ್‌, ಜೆಇಇ, ನೆಟ್‌, ಜಿಪಿಎಟಿ ಹಾಗೂ ಸಿಎಂಎಟಿಗಳಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಸಿಬಿಎಸ್‌ಇ ಹಾಗೂ ಯುಜಿಸಿ ನಡೆಸುತ್ತಿದ್ದ ಈ ಪರೀಕ್ಷೆಗಳ ಉಸ್ತುವಾರಿ ಹೊಣೆಯನ್ನು ಈಗ ಹೊಸ ಸಂಸ್ಥೆ ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ (ಎನ್‌ಟಿಎ)ಗೆ ವಹಿಸಲಾಗಿದೆ.

ಮಾನವ ಸಂಪದಭಿವೃದ್ಧಿ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಶನಿವಾರ ಈ ಘೋಷಣೆ ಮಾಡಿದ್ದಾರೆ. ಎನ್‌ಟಿಎ ನಡೆಸಲಿರುವ ಮೊದಲ ಪರೀಕ್ಷೆ ಡಿಸೆಂಬರ್‌ನಲ್ಲಿ ನಡೆಯುವ ಯುಜಿಸಿ ನೆಟ್‌ ಆಗಿರಲಿದೆ. ಎಲ್ಲ ಟೆಸ್ಟ್‌ಗಳನ್ನೂ ಕಂಪ್ಯೂ ಟರ್‌ ಮೂಲಕವೇ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಸೆಂಟರ್‌, ಪರೀಕ್ಷೆ ದಿನಾಂಕ ಆಯ್ಕೆ ಅವಕಾಶ ಕಲ್ಪಿಸಲಾಗುತ್ತದೆ.

4-5 ದಿನಗಳವರೆಗೆ ಪರೀಕ್ಷೆ
ಜೆಇಇ ಅನ್ನು ಪ್ರತಿ ವರ್ಷ ಜನವರಿ ಮತ್ತು ಎಪ್ರಿಲ್‌ನಲ್ಲಿ ಹಾಗೂ ನೀಟ್‌ ಅನ್ನು ಫೆಬ್ರವರಿ ಮತ್ತು ಮೇಯಲ್ಲಿ ನಡೆಸಲಾಗುತ್ತದೆ. 4-5 ದಿನಗಳ ವರೆಗೆ ಪರೀಕ್ಷೆ ನಡೆಸಲಾಗುತ್ತದೆ. ಪ್ರತೀ ದಿನದ ಪ್ರಶ್ನೆಪತ್ರಿಕೆಯೂ ವಿಭಿನ್ನವಾಗಿ ರುತ್ತದೆ ಮತ್ತು ಪ್ರತೀ ಅಭ್ಯರ್ಥಿಗೆ ಯಾದೃಚ್ಛಿಕ ವಾಗಿ ನೀಡಲಾಗಿರುತ್ತದೆ. ಆದರೆ ಕಾಠಿನ್ಯದ ಮಟ್ಟ ಒಂದೇ ಇರುತ್ತದೆ. 

ಪಠ್ಯಕ್ರಮ ಬದಲಾವಣೆ ಇಲ್ಲ
ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಷ್ಟೇ ಅಲ್ಲ, ಪರೀಕ್ಷೆ ಶುಲ್ಕದಲ್ಲೂ ಬದಲಾವಣೆ ಇಲ್ಲ. ಪರೀಕ್ಷೆ ನಡೆಸುವಲ್ಲಿ ಸಂಶೋಧಕರು, ಸಂಖ್ಯಾಶಾಸ್ತ್ರಜ್ಞರು, ಮನಃಶಾಸ್ತ್ರಜ್ಞರು ಮತ್ತು ಶಿಕ್ಷಣ ತಜ್ಞರನ್ನೂ ಸೇರಿಸಿಕೊಳ್ಳಲಾಗುತ್ತದೆ. ಅತ್ಯಂತ ಉನ್ನತ ಗುಣಮಟ್ಟದ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್‌ ಬಳಸಲಾಗುತ್ತದೆ. ಸೋರಿಕೆ ಇಲ್ಲದಂತೆ ಪರೀಕ್ಷೆ ನಡೆಸಲು ಎನ್‌ಕ್ರಿಪ್ಷನ್‌ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ.

ಪರೀಕ್ಷೆಗೆ ತಯಾರಿ ಉಚಿತ
ಎಲ್ಲ ಪರೀಕ್ಷೆಗಳೂ ಕಂಪ್ಯೂಟರ್‌ ಆಧರಿತವಾಗಿವೆ. ಮನೆ ಅಥವಾ ಅಧಿಕೃತ ಕಂಪ್ಯೂಟರ್‌ ಸೆಂಟರ್‌ಗಳಲ್ಲಿ ಉಚಿತವಾಗಿ ವಿದ್ಯಾರ್ಥಿಗಳು ಪ್ರಾಕ್ಟೀಸ್‌ ಮಾಡಬಹುದು. ಉಚಿತವಾಗಿ ತಯಾರಿ ನಡೆಸಬಹುದಾದ ಕೇಂದ್ರಗಳ ವಿವರಗಳನ್ನು ಶೀಘ್ರದಲ್ಲೇ ಬಹಿರಂಗ ಗೊಳಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೂ ಪ್ರಾಕ್ಟೀಸ್‌ ನಡೆಸಲು ಅವಕಾಶ ಸಿಗುವಂತೆ ಗ್ರಾಮೀಣ ಪ್ರದೇಶಗಳಲ್ಲೂ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಆಗಸ್ಟ್‌ ಮೂರನೇ ವಾರದಿಂದ ಪ್ರಾಕ್ಟೀಸ್‌ ನಡೆಸಬಹುದಾಗಿದೆ.

ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ಮಾಡಲಾಗುತ್ತಿದೆ. ಡಿಸೆಂಬರ್‌ನಿಂದ ಎನ್‌ಟಿಎ ದೇಶದಲ್ಲಿ ಪರೀಕ್ಷೆಗಳನ್ನು ನಡೆಸಲು ಆರಂಭಿಸಲಿದೆ. ಶೀಘ್ರದಲ್ಲೇ ಸಮಗ್ರ ವಿವರಗಳನ್ನು ಎನ್‌ಟಿಎ ಬಿಡುಗಡೆ ಮಾಡಲಿದೆ.
– ಪ್ರಕಾಶ್‌ ಜಾಬ್ಡೇಕರ್‌, ಮಾನವ ಸಂಪದಭಿವೃದ್ಧಿ ಸಚಿವ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.