‘ಮಿತ್ರೋ’ ಎನ್ನುವುದು ಒಮಿಕ್ರಾನ್ ಗಿಂತ ಅಪಾಯಕಾರಿ: ಪ್ರಧಾನಿ ಮೋದಿಗೆ ಶಶಿ ತರೂರ್ ಟಾಂಗ್
Team Udayavani, Jan 31, 2022, 1:21 PM IST
ಹೊಸದಿಲ್ಲಿ: ತನ್ನ ಟ್ವೀಟ್ ಗಳಿಂದ ಸದಾ ಸುದ್ದಿಯಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಇದೀಗ ತಮ್ಮ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕುಟುಕಿದ್ದಾರೆ. “ಮಿತ್ರೋ’ ಎನ್ನುವುದು ಒಮಿಕ್ರಾನ್ ಗಿಂತಲೂ ಅಪಾಯಕಾರಿ ಎಂದು ಶಶಿ ತರೂರ್ ಹೇಳಿದ್ದಾರೆ.
“ಓ ಮಿತ್ರೋ ಎನ್ನುವುದು ಒಮಿಕ್ರಾನ್ ಗಿಂತ ಭಾರೀ ಅಪಾಯಕಾರಿ. ಹೆಚ್ಚಿದ ಧ್ರುವೀಕರಣ, ದ್ವೇಷ ಮತ್ತು ಧರ್ಮಾಂಧತೆಯ ಪ್ರಚಾರ, ಸಂವಿಧಾನದ ಮೇಲಿನ ಕಪಟ ದಾಳಿಗಳು ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದರಲ್ಲಿ ನಾವು ಪ್ರತಿದಿನದ ಪರಿಣಾಮಗಳನ್ನು ಕಾಣುತ್ತಿದ್ದೇವೆ. ಈ ವೈರಸ್ ನ ಯಾವುದೇ “ಸೌಮ್ಯ ರೂಪಾಂತರ” ಇಲ್ಲ” ಎಂದು ಶಶಿ ತರೂರ್ ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,000 ಅಂಕ ಜಿಗಿತ; ಲಾಭ, ನಷ್ಟ ಕಂಡ ಷೇರುಗಳು ಯಾವುದು?
‘ಮಿತ್ರೋ’ ಎಂಬ ಪದವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಾಗಿ ಬಳಸುತ್ತಾರೆ. ತಮ್ಮ ಭಾಷಣವನ್ನು ಹೆಚ್ಚಾಗಿ ಈ ಪದದ ಮೂಲಕವೇ ಪ್ರಧಾನಿ ಮೋದಿ ಆರಂಭಿಸುತ್ತಾರೆ.
Far more dangerous than #Omicron is “O Mitron”! We are measuring the consequences of the latter every day in increased polarisation, promotion of hatred & bigotry, insidious assaults on the Constitution & the weakening of our democracy. There is no “milder variant” of this virus.
— Shashi Tharoor (@ShashiTharoor) January 31, 2022
ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ವಿರುದ್ಧ ತಿರುವನಂತರಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಸದಾ ವಾಗ್ದಾಳಿ ನಡೆಸುತ್ತಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಇತ್ತೀಚೆಗೆ ಟೀಕೆ ಮಾಡಿದ್ದ ತರೂರ್, “ ದೇಶಕ್ಕೆ ಯಾವ ರೀತಿ ಹಾನಿ ಮಾಡುತ್ತಿದ್ದಾರೆಂಬ ಕಲ್ಪನೆಯೂ ಯೋಗಿ ಆದಿತ್ಯನಾಥ್ ಗೆ ಇಲ್ಲ. ದೇಶವನ್ನು ಇವರು ಸ್ಮಶಾವನ್ನಾಗಿಸಿದ್ದಾರೆ” ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು