ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?
Team Udayavani, Aug 5, 2021, 7:20 AM IST
ಹೊಸದಿಲ್ಲಿ: ಇನ್ನು ಮುಂದೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಅಧಿಕಾರ ಮತ್ತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೇ ಬರಲಿದೆ!
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಮೇ 5ರಂದು ಸುಪ್ರೀಂಕೋರ್ಟ್, ಒಬಿಸಿ ಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗಿಲ್ಲ ಎಂದು ತೀರ್ಪು ನೀಡಿತ್ತು. ಹಾಗೆಯೇ ಕೇಂದ್ರ ಸರಕಾರಕ್ಕೆ ಮಾತ್ರ ಇಂಥ ಅಧಿಕಾರವಿದೆ ಎಂದೂ ಹೇಳಿತ್ತು. ಈಗ ಕೇಂದ್ರ ಸರಕಾರ ರಾಜ್ಯಗಳಿಗೆ ಒಬಿಸಿ ಪಟ್ಟಿ ರಚಿಸುವ ಅಧಿಕಾರ ನೀಡುವಂಥ ಸಂವಿಧಾನ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ನೀಡಿದೆ ಎಂದು ಮೂಲಗಳು ಹೇಳಿವೆ. ಸದ್ಯದಲ್ಲೇ ಇದನ್ನು ಸಂಸತ್ನ ಉಭಯ ಸದನಗಳಲ್ಲೂ ಮಂಡಿಸಿ ಅಂಗೀಕಾರ ಪಡೆಯಲಾಗುತ್ತದೆ ಎಂದೂ ಹೇಳಲಾಗಿದೆ.
ಮುಂದುವರಿಕೆ: ಸದ್ಯ ಜಾರಿಯಲ್ಲಿರುವ ಸರ್ವ ಶಿಕ್ಷಾ ಅಭಿಯಾನವನ್ನು ಮುಂದಿನ 5 ವರ್ಷಗಳ ಕಾಲ ಮುಂದುವರಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಅದರ ಅನ್ವಯ ಪ್ರಸಕ್ತ ವರ್ಷದ ಎ.1ರಿಂದ 2026ರ ಮಾ.31ರ ವರೆಗೆ ಯೋಜನೆ ಮುಂದುವರಿಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅದಕ್ಕೆ “ಸಮಗ್ರ ಶಿಕ್ಷಾ ಅಭಿಯಾನ 2′ ಎಂದು ಹೆಸರಿಸಲಾಗಿದೆ.
ಅನುಮತಿ: ದೇಶದಲ್ಲಿ 1,023 ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನು ಮುಂದುವರಿಸುವ ಬಗ್ಗೆ ಕೇಂದ್ರ ಸಂಪುಟ ಅನುಮತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ