ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ; ಎದೆಗೆ ಗುರಿಯಿಟ್ಟ ದುಷ್ಕರ್ಮಿಗಳು
Team Udayavani, Jan 29, 2023, 1:23 PM IST
ಭುವನೇಶ್ವರ: ಆಘಾತಕಾರಿ ಘಟನೆಯಲ್ಲಿ ಒಡಿಶಾ ಆರೋಗ್ಯ ಸಚಿವ ಮತ್ತು ಬಿಜೆಡಿ ನಾಯಕ ನಬಾ ದಾಸ್ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದು, ಎದೆಗೆ ಗುರಿಯಿಸಿ ಶೂಟ್ ಮಾಡಲಾಗಿದೆ. ನಬಾ ದಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾನುವಾರ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚಕ್ ಬಳಿ ಈ ಘಟನೆ ನಡೆದಿದ್ದು, ನಬಾ ದಾಸ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಗುಂಡಿನ ದಾಳಿ ಮಾಡಲಾಗಿದೆ.
ನಬಾ ದಾಸ್ ವಾಹನದಿಂದ ಇಳಿದ ನಂತರ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಇದನ್ನೂ ಓದಿ:ಕಾಂಗ್ರೆಸ್ ರೀತಿ ಕೀಳುಮಟ್ಟದ ವಿಚಾರದೊಂದಿಗೆ ಪ್ರಚಾರ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ
ಘಟನೆಯ ನಂತರ, ನಬಾ ದಾಸ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಗುಂಡಿನ ದಾಳಿಯ ನಂತರ ಬಿಜೆಡಿ ಕಾರ್ಯಕರ್ತರು ಧರಣಿ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ.
ಸಚಿವರ ಮೇಲೆ ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದ್ದು, ಗುಂಡಿನ ದಾಳಿ ‘ಪೂರ್ವ ಯೋಜಿತ’ ಎಂದು ಶಂಕಿಸಲಾಗಿದೆ. ಮೆಗಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ನಬಾ ದಾಸ್ ಗೆ ಪೊಲೀಸ್ ಬೆಂಗಾವಲು ಸಹ ಒದಗಿಸಲಾಗಿತ್ತು. ಆದರೆ ಈ ಘಟನೆಯು ಭದ್ರತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!
Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ
ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು
MUST WATCH
ಹೊಸ ಸೇರ್ಪಡೆ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು