ಶಾಲೆ,ಕಾಲೇಜುಗಳ ಪಠ್ಯಕ್ರಮ : ವಿಪತ್ತು, ಸೋಂಕು ನಿರ್ವಹಣೆಯ ಪಾಠಗಳ ಸೇರ್ಪಡೆಗೆ ಒಡಿಶಾ ನಿರ್ಧಾರ

ಒಡಿಶಾದ ಪ್ರತಿಯೊಂದು ಮನೆ ಮನೆಗಳಲ್ಲಿಯೂ 'ಯೋಧ' ತಯಾರಾಗಬೇಕೆನ್ನುವ ಉದ್ದೇಶ : ಪಟ್ನಾಯಕ್

Team Udayavani, May 30, 2021, 3:56 PM IST

30-3

ಪ್ರಾತಿನಿಧಿಕ ಚಿತ್ರ

ಭುವನೇಶ್ವರ: ಒಡಿಶಾ ಸರ್ಕಾರವು ಕೋವಿಡ್ ಸೋಂಕು ಹಾಗೂ ಚಂಡ ಮಾರುತದ ವಿಪತ್ತುಗಳ ಕುರಿತಾದ ವಿಚಾರಗಳನ್ನು ಪ್ರೌಢ ಶಾಲೆ ಹಾಗೂ ಕಾಲೇಜುಗಳ ಪಠ್ಯ ಕ್ರಮಗಳಲ್ಲಿ ಅಳವಡಿಸಲು ನಿರ್ಧರಿಸಿದ ಎಂಬ ವರದಿಯಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಮಂಡಳಿಯ ಸಭೆಯಲ್ಲಿ ಈ ನಿಟ್ಟಿನಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಪದೇ ಪದೇ ಚಂಡಮಾರುತಗಳು, ಮತ್ತು ಸಾಂಕ್ರಾಮಿಕ ರೋಗಗಳಂತಹ ಅನಾಹುತಗಳಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯದ ಎಲ್ಲರೂ ಸಿದ್ಧರಾಗಿರಬೇಕು. ಈ ಸವಾಲುಗಳು ಮುಂದಿನ ತಲೆಮಾರಿಗೆ ಪಾಠವಾಗುವ ಉದ್ದೇಶದಿಂದ  ಈ ವಿಷಯಗಳನ್ನು ಪಠ್ಯ ಕ್ರಮಗಳಲ್ಲಿ ಅಳವಡಿಸಿಕೊಳ್ಳುವುದು ಉತ್ತಮ ಎಂದು ಮಂತ್ರಿ ಮಂಡಳದ ಸಭೆಯಲ್ಲಿ ಮಂತ್ರಿಗಳು ಅಭಿಪ್ರಾಯ ಪಟ್ಟಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ತೆಂಕಿಲ : ಮಹಿಳೆಯೋರ್ವರ ಕರಿಮಣಿ ಸರ ಎಳೆದು ಬೈಕ್ ನಲ್ಲಿ ಪರಾರಿಯಾದ ಅಪರಿಚಿತರು

ವಿಪತ್ತುಗಳು ಹಾಗೂ ವಿಪತ್ತಿನಿಂದ ಉಂಟಾದ ಹಾನಿಯಿಂದಾಗಿ ಒಡಿಶಾ ಕರುಣೆಯ ವಿಷಯವಾಗಿತ್ತು. ಆದರೆ ಇಂದು, ವಿಪತ್ತು ನಿರ್ವಹಣೆಯ ಒಡಿಶಾ ಮಾದರಿಯು ಜಾಗತಿಕ ಮೆಚ್ಚುಗೆಯನ್ನು ಸೆಳೆಯುತ್ತದೆ ಎಂದು ಮಂತ್ರಿ ಮಂಡದ ನಿರ್ಣಯವು ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್,  ಪ್ರತಿಯೊಬ್ಬರನ್ನು ಯೋಧರನ್ನಾಗಿ ಮಾಡುವಂತಹ ಬೃಹತ್ ಜ್ಞಾನ ಮೂಲ ಸೌಕರ್ಯವನ್ನು ನಾವು ರಚಿಸುವ ಸಮಯ ಬಂದಿದೆ. ಇಂದು ನಾವು ಭವಿಷ್ಯದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇವೆ. ಈಗಾಗಲೇ ತಿಳಿದಿರುವ ತುರ್ತು ಪರಿಸ್ಥಿತಿಗಳನ್ನು ಹೇಗೆ ಎದುರಿಸಬೇಕು ಮತ್ತು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಕುರಿತು ನಾವು ನಮ್ಮ ಜನರಿಗೆ ದೊಡ್ಡ ಪ್ರಮಾಣದಲ್ಲಿ ತರಬೇತಿ ನೀಡುತ್ತೇವೆ. ಶಾಲಾ ಕಾಲೇಜು ಮಟ್ಟದಲ್ಲಿಯೇ ಇಂತಹ ಪರಿಸ್ಥಿತಿಗಳನ್ನು ಎದುರಿಸುವ ಪಾಠ ದೊರಕಬೇಕೆನ್ನುವುದರ ಉದ್ದೇಶ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ನದಿಗೆ ಶವ ಎಸೆದ ಪಿಪಿಇ ಕಿಟ್ ಧರಿಸಿದ ವ್ಯಕ್ತಿ

ಪ್ರೌಢ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಪಠ್ಯಕ್ರಮದ ಭಾಗವಾಗಿ ವಿಪತ್ತು ಮತ್ತು ಸಾಂಕ್ರಾಮಿಕ ನಿರ್ವಹಣೆ ಬಗ್ಗೆ ಇರಲಿದೆ.

ಇನ್ನು, ರಾಜ್ಯ ಸರ್ಕಾರದ ತನ್ನ ಉದ್ಯೋಗಿಗೂ ವಿವಿಧ ರೀತಿಯ ವಿಪತ್ತು ಮತ್ತು ಸಾಂಕ್ರಾಮಿಕ ನಿರ್ವಹಣೆಯ ಮೂಲಭೂತ ಸ್ವರೂಪದ ಬಗ್ಗೆ ತರಬೇತಿ ನೀಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸರ್ಕಾರವು ಮಿಷನ್ ಶಕ್ತಿ ಗುಂಪುಗಳು, ವನ ಸುರಕ್ಯ ಸಮಿತಿಗಳು ಮತ್ತು ಇತರ ಸಮುದಾಯ ಆಧಾರಿತ ಸಂಸ್ಥೆಗಳ ಸದಸ್ಯರಿಗೆ ತರಬೇತಿ ನೀಡಲಿದೆ ಮತ್ತು ವಿಪತ್ತುಗಳು ಮತ್ತು ಸಾಂಕ್ರಾಮಿಕ ರೋಗಗಳನ್ನು ನಿರ್ವಹಿಸಲು ಅಗತ್ಯವಾದ ಜ್ಞಾನವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಮಾತ್ರವಲ್ಲದೇ, ಒಡಿಶಾವನ್ನು ವಿಪತ್ತು ಸಂದರ್ಭದಲ್ಲಿ ಸನ್ನದ್ಧತೆಯಲ್ಲಿರುವ ಪ್ರಮುಖ ರಾಜ್ಯವನ್ನಾಗಿ ಮಾಡಲು ಮಂತ್ರಿ ಮಂಡಳ ನಿರ್ಧರಿಸಿದೆ.

“ಒಡಿಶಾದ ಪ್ರತಿಯೊಂದು ಮನೆ ಮನೆಗಳಲ್ಲಿಯೂ ‘ಯೋಧ’ ತಯಾರಾಗಬೇಕೆನ್ನುವ ಉದ್ದೇಶವಾಗಿದೆ” ಎಂದು  ಹೇಳಿದ್ದಾರೆ.

ಇದನ್ನೂ ಓದಿ :  SBIನ ಯಾವುದೇ ಶಾಖೆಯಲ್ಲೂ ದಿನಕ್ಕೆ ಇಷ್ಟು ಹಣವನ್ನು ತೆಗೆಯಬಹುದು..!

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.