ಮಾಯಾವತಿಗೆ ಸಿಎಂ ಹುದ್ದೆ: ಕಾಂಗ್ರೆಸ್ ಆಫರ್!
Team Udayavani, Apr 10, 2022, 7:40 AM IST
ನವದೆಹಲಿ: “ಉತ್ತರ ಪ್ರದೇಶ ಚುನಾವಣೆಗೂ ಮುನ್ನ ನಾವು ಮಾಯಾವತಿಯವರ ಬಿಎಸ್ಪಿ ಪಕ್ಷದ ಜೊತೆಗೆ ಕೈ ಜೋಡಿಸಲು ಸಿದ್ಧವಾಗಿದ್ದೆವು. ಮಾಯಾವತಿಯವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಲು ಸಹ ಒಪ್ಪಿದ್ದೆವು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ದೆಹಲಿಯಲ್ಲಿ ಆಯೋಜಿಸಲಾಗಿದ್ದ “ದ ದಲಿತ್ ಟ್ರಾತ್’ ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.
“ಮುಖ್ಯಮಂತ್ರಿ ಹುದ್ದೆಯನ್ನು ಕೊಡುವುದಾಗಿ ಹೇಳಿದರೂ ಮಾಯಾವತಿಯವರು ಕಾಂಗ್ರೆಸ್ ಜೊತೆಗೆ ಕೈ ಜೋಡಿಸಲಿಲ್ಲ. ಪ್ರತ್ಯೇಕವಾಗಿ ಸ್ಪರ್ಧಿಸಲು ಮುಂದಾದರು.
ಕೇಂದ್ರ ಸರ್ಕಾರದ ಸಿಬಿಐ, ಇ.ಡಿ. ಹಾಗೂ ಪೆಗಾಸಸ್ ಭೀತಿಗಳಿಗೆ ಹೆದರಿ ಅವರು ಬಿಜೆಪಿಯು ಉತ್ತರ ಪ್ರದೇಶದಲ್ಲಿ ಪುನಃ ಅಧಿಕಾರ ಗದ್ದುಗೆಗೇರಲು ಪರೋಕ್ಷವಾಗಿ ಸಹಾಯ ಮಾಡಿದರು” ಎಂದು ರಾಹುಲ್ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!