ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸುವುದಿಲ್ಲ: ಹರ್ಯಾಣ ಸಿಎಂ ಖಟ್ಟರ್


Team Udayavani, Dec 11, 2021, 2:46 PM IST

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸುವುದಿಲ್ಲ: ಹರ್ಯಾಣ ಸಿಎಂ ಖಟ್ಟರ್

ಗುರುಗ್ರಾಮ: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಸಮಸ್ಯೆಯನ್ನು ಪರಿಹರಿಸಲು ನಾನು ಪೊಲೀಸರಿಗೆ ಹೇಳಿದ್ದೇನೆ, ಜನರು ನಿಗದಿತ ಸ್ಥಳಗಳಲ್ಲಿ ನಮಾಜ್ ಅಥವಾ ಪೂಜೆ ಸಲ್ಲಿಸಲು ಯಾವುದೇ ತೊಂದರೆ ಇಲ್ಲ. ಅದಕ್ಕಾಗಿಯೇ ಧಾರ್ಮಿಕ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಆದರೆ ತೆರೆದ ಜಾಗದಲ್ಲಿ ನಮಾಜ್ ಮಾಡುವ ಕ್ರಮವನ್ನು ಸಹಿಸುವುದಿಲ್ಲ. ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗುವುದು” ಎಂದರು.

ತಮ್ಮ ಬಳಿ ಕೆಲವು ಜಮೀನುಗಳಿದ್ದು, ಅಲ್ಲಿ ಅನುಮತಿ ನೀಡಬೇಕು ಎಂದು ಅವರು ಹೇಳಿದ್ದಾರೆ. ವಕ್ಫ್‌ ನ ಯಾವುದಾದರೂ ಜಮೀನು ಅತಿಕ್ರಮಣಕ್ಕೆ ಒಳಗಾಗಿದ್ದರೆ ಅದನ್ನು ಲಭ್ಯವಾಗುವಂತೆ ನೋಡಿಕೊಳ್ಳುತ್ತೇವೆ. ಜನರು ತಮ್ಮ ಮನೆಗಳಲ್ಲಿ ನಮಾಜ್ ಮಾಡಬಹುದು. ಆದರೆ ತೆರೆದ ಸ್ಥಳಗಳಲ್ಲಿ ಇದನ್ನು ಮಾಡುವುದರಿಂದ ಘರ್ಷಣೆಗಳು ಉಂಟಾಗಬಹುದು. ಜನರ ಹಕ್ಕುಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಆದರೆ ಬಲವಂತವಾಗಿ ಏನನ್ನಾದರೂ ಮಾಡುವುದನ್ನು ಸಹಿಸಲಾಗುವುದಿಲ್ಲ” ಎಂದು ಹರ್ಯಾಣ ಸಿಎಂ ಹೇಳಿದರು.

ಇದನ್ನೂ ಓದಿ:ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಜೈಲಿನ ಮಹಡಿಯಿಂದ ಬಿದ್ದು ಸಾವು!

ನವೆಂಬರ್‌ನಲ್ಲಿ ಗುರುಗ್ರಾಮ್ ಆಡಳಿತವು 37 ಗೊತ್ತುಪಡಿಸಿದ ಜಾಗಗಳಲ್ಲಿ ಎಂಟರಲ್ಲಿ ನಮಾಜ್ ಮಾಡಲು ಅನುಮತಿಯನ್ನು ಹಿಂಪಡೆದಿತ್ತು. ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ನಿವಾಸಿ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಆಕ್ಷೇಪಣೆಯ ನಂತರ ಅನುಮತಿಯನ್ನು ರದ್ದುಗೊಳಿಸಲಾಗಿದೆ.

ಗುರುಗ್ರಾಮದಲ್ಲಿ ಶುಕ್ರವಾರ ನಮಾಝ್ ಅನ್ನು ತೆರೆದ ಸ್ಥಳಗಳಲ್ಲಿ ನಡೆಸುವ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಸ್ಲಿಂ ರಾಷ್ಟ್ರೀಯ ವೇದಿಕೆ ಮತ್ತು ಗುರುಗ್ರಾಮ ಇಮಾಮ್ ಸಂಘಟನೆಯ ಧರ್ಮಗುರುಗಳು ಜಿಲ್ಲಾಡಳಿತಕ್ಕೆ ಕೆಲವು ದಿನಗಳ ಹಿಂದೆ ಸಲ್ಲಿಸಿದ ಜ್ಞಾಪನಾ ಪತ್ರದಲ್ಲಿ ಶುಕ್ರವಾರದ ನಮಾಜ್ 12 ಸ್ಥಳಗಳಲ್ಲಿ ನಡೆಯಲಿದೆ. ಯಾರಾದರೂ ಅಡ್ಡಿಪಡಿಸಿದರೆ ಮುಸ್ಲಿಮ್ ನ್ಯಾಷನಲ್ ಫೋರಂ ಮತ್ತು ಇಮಾಮ್ ಆರ್ಗನೈಸೇಶನ್ ಅದನ್ನು ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಮಸೀದಿ, ಮದರಸಾಗಳು ಮತ್ತು ವಕ್ಫ್ ಬೋರ್ಡ್‌ನ ಭೂಮಿ ಮೇಲಿನ ಅತಿಕ್ರಮಣಗಳನ್ನು ತೆಗೆದುಹಾಕಲು ನಾವು ಆಡಳಿತಕ್ಕೆ ಮನವಿ ಮಾಡಿದ್ದೇವೆ, ಇದರಿಂದ ನಮಾಜ್ ಶಾಂತಿಯುತವಾಗಿ ಸಲ್ಲಿಸಬಹುದು ಎಂದು ಮುಸ್ಲಿಂ ರಾಷ್ಟ್ರೀಯ ವೇದಿಕೆಯ ಸಂಚಾಲಕ ಖುರ್ಷಿದ್ ರಜಾಕಾ ಐಎಎನ್‌ಎಸ್‌ಗೆ ತಿಳಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.