ಇಂದಿನಿಂದ ಓಲಾ, ಉಬರ್ ಟ್ಯಾಕ್ಸಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ
Team Udayavani, Mar 19, 2018, 11:13 AM IST
ಮುಂಬಯಿ : ತಮ್ಮ ಪಾವತಿ ವ್ಯವಸ್ಥೆಯನ್ನು ಪುನರ್ ರೂಪಿಸಬೇಕೆಂದು ಆಗ್ರಹಿಸಿ ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಟ್ಯಾಕ್ಸಿ ಚಾಲಕರು ಇಂದು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ.
ಇದರ ಪರಿಣಾಮವಾಗಿ ಹೊಸದಿಲ್ಲಿ, ಮುಂಬಯಿ, ಹೈದರಾಬಾದ್, ಪುಣೆ ಮತ್ತು ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಲಿದೆ.
“ನಮಗೆ ದೊಡ್ಡ ಪಾವತಿಯ ಭರವಸೆಗಳನ್ನು ನೀಡಲಾಗಿತ್ತು. ಆದರೆ ವಾಸ್ತವದಲ್ಲಿ ನಮ್ಮ ವಾಹನದ ಖರ್ಚು ವೆಚ್ಚಗಳನ್ನು ಕೂಡ ನಿಭಾಯಿಸಲಾಗಷ್ಟು ಕಡಿಮೆ ಮೊತ್ತದ ಪಾವತಿ ನಮಗೆ ಸಿಗುತ್ತಿದೆ. ನಾವು ಐದರಿಂದ ಏಳು ಲಕ್ಷ ರೂಪಾಯಗಳನ್ನು ಈ ವಹಿವಾಟಿನಲ್ಲಿ ತೊಡಗಿಸಿದ್ದೇವೆ; ನಾವು ತಿಂಗಳಿಗೆ 1.5 ಲಕ್ಷ ರೂ. ನಿರೀಕ್ಷಿಸುತ್ತಿದ್ದೇವೆ. ಆದರೆ ನಮಗೆ ಅದು ಕನಸಿನ ಗಂಟಾಗಿದೆ. ಇದಕ್ಕೆ ಕಾರಣ ಈ ಕಂಪೆನಿಗಳ ಆಡಳಿತೆಯ ನಮೂನೆ ದೋಷಯುಕ್ತವಾಗಿರುವುದೇ ಆಗಿದೆ ‘ ಎಂದು ಓಲಾ, ಉಬರ್ ಟ್ಯಾಕ್ಸಿ ಚಾಲಕರು ಹೇಳಿದ್ದಾರೆ.
ಓಲಾ ಮತ್ತು ಉಬರ್ ಟ್ಯಾಕ್ಸಿ ಚಾಲಕರ ಈ ಮುಷ್ಕರವನ್ನು ಮಹಾರಾಷ್ಟ್ರ ನವನಿರ್ಮಾಣ ವಾಹತುಕ್ ಸೇನಾ ನಿರ್ವಹಿಸುತ್ತಿದ್ದು ಇದರ ಸಂಚಾಲಕ ಸಂಜಯ್ ನಾಯಕ್, ಟ್ಯಾಕ್ಸಿ ಚಾಲಕರ ಪಾವತಿ ವ್ಯವಸ್ಥೆಯನ್ನು ಪುನರ್ ರೂಪಿಸುವುದು ಅತೀ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ಓಲಾ, ಉಬರ್ ಸಂಸ್ಥೆಗಳು ಕಂಪೆನಿ ಮಾಲಕತ್ವದ ಕಾರುಗಳಿಗೆ ಆದ್ಯತೆ ನೀಡುತ್ತವೆಯೇ ಹೊರತು ಟ್ಯಾಕ್ಸಿ ಮಾಲಕರ ಕಾರುಗಳಿಗೆ ಆದ್ಯತೆ ನೀಡುವುದಿಲ್ಲ; ಇದರಿಂದಾಗಿ ನಮ್ಮ ಧ್ವನಿಗೆ ಬೆಲೆ ಇಲ್ಲವಾಗಿದೆ ಎಂದು ಪ್ರತಿಭಟನಕಾರರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ