ಒಮಾನ್ ಏರ್ ವಿಮಾನ: ಇಂಜಿನ್ ವೈಫಲ್ಯ, ತುರ್ತು ಲ್ಯಾಂಡಿಂಗ್; 200 ಪ್ರಯಾಣಿಕರು ಸುರಕ್ಷಿತ
Team Udayavani, Jul 3, 2019, 7:09 PM IST
ಮುಂಬಯಿ : ಮುಂಬಯಿ – ಮಸ್ಕತ್ ಹಾರಾಟದ ಓಮನ್ ಏರ್ ವಿಮಾನ ಇಂದು ಬುಧವಾರ ಇಲ್ಲಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪವೇ ಹೊತ್ತಿನಲ್ಲಿ ಅದರ ಒಂದು ಇಂಜಿನ್ನಲ್ಲಿ ದೋಷ ಕಾಣಿಸಿಕೊಂಡ ಕಾರಣ ತುರ್ತು ಲ್ಯಾಂಡಿಗ್ ಮಾಡಿದ ಘಟನೆ ವರದಿಯಾಗಿದೆ.
ವಿಮಾನದಲ್ಲಿದ್ದ 200 ಮಂದಿ ಪ್ರಯಾಣಿಕರು ಸುರಕ್ಷಿತರಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಒಮಾನ್ ಏರ್ನ WY 204 ವಿಮಾನ ಇಂದು ಬುಧವಾರ ಸಂಜೆ 4.58ರ ಹೊತ್ತಿಗೆ ಮುಂಬಯಿ ಏರ್ ಪೋರ್ಟ್ ನಿಂದ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ತುರ್ತಾಗಿ ಇಳಿಯಿತು ಎಂದು ವರದಿಗಳು ತಿಳಿಸಿವೆ.
ವಿಮಾನ ಟೇಕಾಫ್ ಆದ ಹತ್ತೇ ನಿಮಿಷದಲ್ಲಿ ತುರ್ತು ಲ್ಯಾಂಡಿಂಗ್ ನಡೆದದ್ದು ಪ್ರಯಾಣಿಕರಲ್ಲಿ, ವಿಮಾನ ನಿಲ್ದಾಣದ ಅಧಿಕಾರಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. 4.50ರ ಸುಮಾರಿಗೆ ವಿಮಾನ ಮರಳಿ ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದ ತತ್ಕ್ಷಣವೇ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಸ್ಥಿತಿಯನ್ನು ಘೋಷಿಸಲಾಯಿತು ಎಂದು ವರದಿಗಳು ತಿಳಿಸಿವೆ.
ವಿಮಾನದಲ್ಲಿ ಪ್ರಯಾಣಿಕರು ಮತ್ತು ಚಾಲಕ ಸಿಬಂದಿಗಳ ಸಹಿತ ಒಟ್ಟು 205 ಮಂದಿ ಇದ್ದು ಅವರೆಲ್ಲರೂ ತುರ್ತು ಲ್ಯಾಂಡಿಂಗ್ ಹೊರತಾಗಿಯೂ ಸಂಪೂರ್ಣವಾಗಿ ಸುರಕ್ಷಿತರಿದ್ದಾರೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ